ಬ್ರೇಕಿಂಗ್ ನ್ಯೂಸ್
27-02-24 07:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 27: ಬಿಜೆಪಿಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಹೊಂದಾಣಿಕೆ ರಾಜಕೀಯದ ಬಗ್ಗೆ ಶಾಸಕ ಯತ್ನಾಳ್ ಮತ್ತೊಮ್ಮೆ ಕಿಡಿಕಾರಿದ್ದಾರೆ.
ಕೆಲವು ದಿನಗಳ ಹಿಂದೆ ಭಜರಂಗದಳದ ಮುಖಂಡರೊಬ್ಬರು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಅಡ್ಜಸ್ಟ್ಮೆಂಟ್ ಅಶೋಕ್ ಎಂದು ಲೇವಡಿ ಮಾಡಿದ್ದರು.
ರಾಜ್ಯಸಭಾ ಚುನಾವಣೆಗೆ ಮತಚಲಾಯಿಸಿದ ನಂತರ ಮಾತನಾಡಿದ ಯತ್ನಾಳ್, " ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕೀಯ ಜೋರಾಗಿದೆ ಎಂದು ಎರಡು ದಿನಗಳ ಹಿಂದೆ ಕೂಡಾ ನಾನು ಹೇಳಿದ್ದೆ. ಬಿಜೆಪಿ ಯಾಕೆ ಕೆಲವೊಂದು ಕ್ಷೇತ್ರದಲ್ಲಿ ಸೋತಿತು, ಯಾರಿಂದ ಸೋತಿತು ಎನ್ನುವುದನ್ನು ಹೇಳಿದ್ದೆ " ಎಂದು ಪಕ್ಷದ ಕೆಲವು ನಾಯಕರ ವಿರುದ್ದ ಪರೋಕ್ಷವಾಗಿ ಗುಡುಗಿದ್ದಾರೆ.
![]()
ಶಿಕಾರಿಪುರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬ 70 - 72 ಸಾವಿರ ವೋಟ್ ತಗೋತಾನೆ, ನಮ್ಮ ಸೋಮಣ್ಣನವರನ್ನು ಎರಡೂ (ವರುಣಾ, ಚಾಮರಾಜನಗರ) ಕಡೆ ಹೀನಾಯವಾಗಿ ಸೋಲಿಸುತ್ತಾರೆ. ಕನಕಪುರದಲ್ಲಿ ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ. ಹೊಂದಾಣಿಕೆ ರಾಜಕೀಯಕ್ಕೆ ಇದಕ್ಕಿಂತ ಹೆಚ್ಚಿನ ಉದಾಹರಣೆ ಇನ್ನೇನು ಬೇಕು " ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಸೋಮಣ್ಣನವರನ್ನು ಸೋಲಿಸುವಲ್ಲಿ ನಮ್ಮವರ ಪಾತ್ರ ದೊಡ್ಡದಿದೆ, ಪೂಜ್ಯ ತಂದೆಯವರ ಮಗ ನಿಷ್ಟಾವಂತ ಕಾರ್ಯಕರ್ತನೊಬ್ಬನನ್ನು ವರುಣಾ ಮತ್ತು ಚಾಮರಾಜನಗರದಲ್ಲಿ ಬಿಟ್ಟಿದ್ದ. ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ರಾಜಕೀಯದಲ್ಲಿ ಕೆಲವೊಂದು ನಡೆಯಬಾರದ್ದು ನಡೆಯುತ್ತದೆ, ಅದಕ್ಕೆ ನಿತೀಶ್ ಕುಮಾರ್ ವಾಪಸ್ ಎನ್ಡಿಎ ಮೈತ್ರಿಕೂಟಕ್ಕೆ ಬರಲಿಲ್ಲವೇ " ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯ ಪಟ್ಟಿದ್ದಾರೆ.


ಸೋಮಶೇಖರ್ ಮತ್ತು ಯಡಿಯೂರಪ್ಪನವರು ಬಹಳ ಆತ್ಮೀಯರು, ನನ್ನ ಮಗ ರಾಜ್ಯಾಧ್ಯಕ್ಷ ಆಗುತ್ತಾನೆ ಎಂದು ಯಡಿಯೂರಪ್ಪ ಅವರಿಗೆ ಹಿಂದೆನೇ ಹೇಳಿದ್ದರು. ಈಗ ರಾಜ್ಯಸಭಾ ಚುನಾವಣೆಯಲ್ಲಿ ಆಗಿರುವ ಹಿನ್ನಡೆಗೆ ಜೋಡೆತ್ತುಗಳು (ವಿಜಯೇಂದ್ರ, ಆರ್.ಅಶೋಕ್) ಉತ್ತರ ನೀಡಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಎರಡು ತಿಂಗಳ ಹಿಂದೆ ವಿ.ಸೋಮಣ್ಣನವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ದ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ನನ್ನನ್ನು ಸೋಲಿಸಿದವರ ಜೊತೆಗೆ ಅವರಿಗೇನು ಕೆಲಸ ? ಅವರ ಜೊತೆ ಅಂತರ ಕಾಯ್ದುಕೊಂಡರೆ ಸರಿ, ಇಲ್ಲದಿದ್ದರೆ ನಾನು ನೇರವಾಗಿ ವರಿಷ್ಠರಿಗೆ ದೂರು ನೀಡಬೇಕಾಗುತ್ತದೆ ಎಂದು ಸೋಮಣ್ಣ ಗುಡುಗಿದ್ದರು.
ಶಿಕಾರಿಪುರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದ ಎಸ್.ಪಿ.ನಾಗರಾಜ ಗೌಡ 70,802 ಮತಗಳನ್ನು ಪಡೆದಿದ್ದರು. ಯತ್ನಾಳ್ ಉಲ್ಲೇಖಿಸಿರುವ ಪಕ್ಷೇತರ ಅಭ್ಯರ್ಥಿ ಇವರೇ. ಇನ್ನು ಚಾಮರಾಜನಗರದಲ್ಲಿ ವಿ.ಸೋಮಣ್ಣ 76,325 ಮತಗಳನ್ನು ಪಡೆದಿದ್ದರೂ, ಕಾಂಗ್ರೆಸ್ಸಿನ ಪುಟ್ಟರಂಗ ಶೆಟ್ಟಿ ವಿರುದ್ದ 7,533 ಮತಗಳ ಅಂತರದಿಂದ ಸೋಲುಂಡಿದ್ದರು. ಕನಕಪುರದಲ್ಲಿ ಆರ್.ಅಶೋಕ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ದ ಸ್ಪರ್ಧಿಸಿದ್ದರು. ಆದರೆ ಪದ್ಮನಾಭ ನಗರ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದ ಅಶೋಕ್, ಕನಕಪುರದಲ್ಲಿ ಕಾಟಾಚಾರಕ್ಕೆ ಪ್ರಚಾರ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಅವರ ವಿರುದ್ದ ಆರ್.ಅಶೋಕ್ ಸೇರಿ ಎಲ್ಲರೂ ಠೇವಣಿಯನ್ನು ಕಳೆದುಕೊಂಡಿದ್ದರು.
Yatnal slams Yediyurappa and son says there are reason for Somannas defeat. The great son B. Y. Vijayendra is the mastermind for Somanna to lose elections he added.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm