ಬ್ರೇಕಿಂಗ್ ನ್ಯೂಸ್
27-02-24 11:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯ ಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ.
ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 47, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿದ್ದಾರೆ.
ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದರಿಂದ ಕುತೂಹಲ ಶುರುವಾಗಿತ್ತು. ಕಾಂಗ್ರೆಸ್ಗೆ ಬೇಕಿದ್ದ ಮತಗಳು ಸರಿಯಾಗಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿತ್ತು. ಕಾಂಗ್ರೆಸ್ನಿಂದ ಆತ್ಮಸಾಕ್ಷಿಯ ಮತಗಳು ಬರಲಿವೆ. ತಾವು ಗೆದ್ದೇ ಗೆಲ್ಲುವುದಾಗಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸಹಿತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಹೇಳುತ್ತಿದ್ದರು. ಇದು ಕಾಂಗ್ರೆಸ್ ಆತಂಕವನ್ನು ಹೆಚ್ಚಿಸಿತ್ತು. ಆದರೆ ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಬೆಂಬಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ. ಬಿಜೆಪಿಯ ರೆಬೆಲ್ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ಗೆ ಅಡ್ಡ ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮತದಾನಕ್ಕೇ ಬಾರದೇ ದೂರವುಳಿದರು. ಇದು ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಮುಖಭಂಗ ಆದಂತಾಗಿದೆ.
The Rajya Sabha elections for four seats from Karnataka is being keenly watch with the entry of a fifth candidate for the four seats in the state. The entry of multi-millionaire real estate baron, D Kupendra Reddy, a Janata Dal (Secular)-BJP candidate has turned the elections to the fourth seat into a keen contest.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm