ಬ್ರೇಕಿಂಗ್ ನ್ಯೂಸ್
27-02-24 11:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯ ಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ.
ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 47, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿದ್ದಾರೆ.
ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದರಿಂದ ಕುತೂಹಲ ಶುರುವಾಗಿತ್ತು. ಕಾಂಗ್ರೆಸ್ಗೆ ಬೇಕಿದ್ದ ಮತಗಳು ಸರಿಯಾಗಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿತ್ತು. ಕಾಂಗ್ರೆಸ್ನಿಂದ ಆತ್ಮಸಾಕ್ಷಿಯ ಮತಗಳು ಬರಲಿವೆ. ತಾವು ಗೆದ್ದೇ ಗೆಲ್ಲುವುದಾಗಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸಹಿತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಹೇಳುತ್ತಿದ್ದರು. ಇದು ಕಾಂಗ್ರೆಸ್ ಆತಂಕವನ್ನು ಹೆಚ್ಚಿಸಿತ್ತು. ಆದರೆ ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಬೆಂಬಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ. ಬಿಜೆಪಿಯ ರೆಬೆಲ್ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ಗೆ ಅಡ್ಡ ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮತದಾನಕ್ಕೇ ಬಾರದೇ ದೂರವುಳಿದರು. ಇದು ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಮುಖಭಂಗ ಆದಂತಾಗಿದೆ.
The Rajya Sabha elections for four seats from Karnataka is being keenly watch with the entry of a fifth candidate for the four seats in the state. The entry of multi-millionaire real estate baron, D Kupendra Reddy, a Janata Dal (Secular)-BJP candidate has turned the elections to the fourth seat into a keen contest.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm