ಬ್ರೇಕಿಂಗ್ ನ್ಯೂಸ್
28-02-24 07:23 pm HK News Desk ಕರ್ನಾಟಕ
ಶಿರಸಿ, ಫೆ 28: ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ. ''ಮಂಗಳವಾರ ಮುಂಜಾನೆಯಿಂದ ತಮ್ಮ ಆರೋಗ್ಯದಲ್ಲಿ ಏರುಪೇರು ಆಗಿತ್ತು. ವೈದ್ಯರ ಸಲಹೆಯ ಮೇರೆಗೆ ನಾನು ಮತದಾನಕ್ಕೆ ಹೋಗಲು ಸಾಧ್ಯವಾಗಲಿಲ್ಲ'' ಎಂದು ಸ್ಪಷ್ಟಪಡಿಸಿದರು.
ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ , ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗಲ್ಲ ,ಅನಾರೋಗ್ಯದಿಂದ ಭಾಗವಹಿಸಿಲ್ಲ ಅಷ್ಟೇ ; ಶಾಸಕ ಹೆಬ್ಬಾರ್
ಈ ಕುರಿತು ಯಲ್ಲಾಪುರದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಹೆಬ್ಬಾರ್, ''ಆಸ್ಪತ್ರೆಯಲ್ಲೇ ಸಮಯ ಕಳೆದು ಹೋಯಿತು. ಅದಕ್ಕೆ ರಾಜ್ಯಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಎಲ್ಲವನ್ನು ಎದುರಿಸಲು ಸಿದ್ಧ. ಕಾನೂನು ಹೋರಾಟ ಆಗಿರಲಿ ಅಥವಾ ರಾಜಕೀಯ ವಿಷಯ ಆಗಲಿ'' ಎಂದು ಖಡಕ್ ಆಗಿ ಹೇಳಿದರು.
ಪಕ್ಷದ ಮೇಲೆ ಅಸಮಾಧಾನ ಇದೆ- ಹೆಬ್ಬಾರ್: '
'ತನಗೆ ಬಿಜೆಪಿ ಮೇಲೆ ಅಸಮಾಧಾನ ಇದೆ. ತನ್ನನ್ನು ಸ್ಥಳೀಯ ಬಿಜೆಪಿ ನಾಯಕರು ಸೋಲಿಸಲು ಪ್ರಯತ್ನ ಪಟ್ಟರು. ಇದನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. ಆದ್ರೆ, ಯಾವುದೇ ಕ್ರಮ ಆಗಿಲ್ಲ'' ಎಂದ ಹೆಬ್ಬಾರ್ ಅವರು, ''ಸದ್ಯ ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಹೋಗಲ್ಲ. ಬಿಜೆಪಿಗೆ ರಾಜೀನಾಮೆ ಕೊಡುವ ಪ್ರಮೇಯ ಬಂದಿಲ್ಲ. ನನಗೆ ಪಕ್ಷದ ಮೇಲೆ ಅಸಮಾಧಾನ ಇದೆ. ನನ್ನನ್ನು ಸೋಲಿಸಲು ಮುಂದಾದವರನ್ನೇ ಪೋಷಿಸಲಾಗುತ್ತಿದೆ'' ಎಂದು ಆರೋಪಿಸಿದರು. ಆದ್ರೆ, ಕಾಂಗ್ರೆಸ್ ಸೇರ್ಪಡೆ ವಿಚಾರವನ್ನು ಶಿವರಾಮ್ ಹೆಬ್ಬಾರ್ ತಳ್ಳಿಹಾಕಿದರು.
''ನಾನು ಬಿಜೆಪಿಯ ಶಾಸಕನಾಗಿದ್ದು, ಇಲ್ಲಿ ಶಾಸಕನಾಗಿ ಉಳಿಯುತ್ತೇನೆ. ಆದರೆ, ಕಾದು ನೋಡೋಣ. ಮುಂದೆ ಬದಲಾದ ರಾಜಕಾರಣ ಏನು ಮಾಡಬೇಕು ಎಂಬುದರ ಬಗ್ಗೆ ಚಿಂತಿಸುತ್ತೇನೆ ಎಂದೂ ಸಹ ಪ್ರತಿಕ್ರಿಯಿಸಿದರು. ಇದೇ ವೇಳೆ ಪಾಕಿಸ್ತಾನ ಕುರಿತ ಘೋಷಣೆಗೆ ಸಂಬಂಧಿಸಿದ ಪ್ರತಿಕ್ರಿಯಿಸಿ, ''ಇದನ್ನು ಯಾರೇ ಹೇಳಿದ್ದರೂ ಖಂಡನೀಯ'' ಎಂದರು.
Shivaram Hebbar says will not betray BJP party, give health reason. BJP MLA Shivaram Hebbar, also a former minister, abstained from voting, embarrassing the party leadership in the state.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 04:45 pm
HK News Staffer
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm