ಬ್ರೇಕಿಂಗ್ ನ್ಯೂಸ್
28-02-24 07:23 pm HK News Desk ಕರ್ನಾಟಕ
ಶಿರಸಿ, ಫೆ 28: ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ. ''ಮಂಗಳವಾರ ಮುಂಜಾನೆಯಿಂದ ತಮ್ಮ ಆರೋಗ್ಯದಲ್ಲಿ ಏರುಪೇರು ಆಗಿತ್ತು. ವೈದ್ಯರ ಸಲಹೆಯ ಮೇರೆಗೆ ನಾನು ಮತದಾನಕ್ಕೆ ಹೋಗಲು ಸಾಧ್ಯವಾಗಲಿಲ್ಲ'' ಎಂದು ಸ್ಪಷ್ಟಪಡಿಸಿದರು.
ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ , ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗಲ್ಲ ,ಅನಾರೋಗ್ಯದಿಂದ ಭಾಗವಹಿಸಿಲ್ಲ ಅಷ್ಟೇ ; ಶಾಸಕ ಹೆಬ್ಬಾರ್
ಈ ಕುರಿತು ಯಲ್ಲಾಪುರದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಹೆಬ್ಬಾರ್, ''ಆಸ್ಪತ್ರೆಯಲ್ಲೇ ಸಮಯ ಕಳೆದು ಹೋಯಿತು. ಅದಕ್ಕೆ ರಾಜ್ಯಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಎಲ್ಲವನ್ನು ಎದುರಿಸಲು ಸಿದ್ಧ. ಕಾನೂನು ಹೋರಾಟ ಆಗಿರಲಿ ಅಥವಾ ರಾಜಕೀಯ ವಿಷಯ ಆಗಲಿ'' ಎಂದು ಖಡಕ್ ಆಗಿ ಹೇಳಿದರು.
ಪಕ್ಷದ ಮೇಲೆ ಅಸಮಾಧಾನ ಇದೆ- ಹೆಬ್ಬಾರ್: '
'ತನಗೆ ಬಿಜೆಪಿ ಮೇಲೆ ಅಸಮಾಧಾನ ಇದೆ. ತನ್ನನ್ನು ಸ್ಥಳೀಯ ಬಿಜೆಪಿ ನಾಯಕರು ಸೋಲಿಸಲು ಪ್ರಯತ್ನ ಪಟ್ಟರು. ಇದನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. ಆದ್ರೆ, ಯಾವುದೇ ಕ್ರಮ ಆಗಿಲ್ಲ'' ಎಂದ ಹೆಬ್ಬಾರ್ ಅವರು, ''ಸದ್ಯ ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಹೋಗಲ್ಲ. ಬಿಜೆಪಿಗೆ ರಾಜೀನಾಮೆ ಕೊಡುವ ಪ್ರಮೇಯ ಬಂದಿಲ್ಲ. ನನಗೆ ಪಕ್ಷದ ಮೇಲೆ ಅಸಮಾಧಾನ ಇದೆ. ನನ್ನನ್ನು ಸೋಲಿಸಲು ಮುಂದಾದವರನ್ನೇ ಪೋಷಿಸಲಾಗುತ್ತಿದೆ'' ಎಂದು ಆರೋಪಿಸಿದರು. ಆದ್ರೆ, ಕಾಂಗ್ರೆಸ್ ಸೇರ್ಪಡೆ ವಿಚಾರವನ್ನು ಶಿವರಾಮ್ ಹೆಬ್ಬಾರ್ ತಳ್ಳಿಹಾಕಿದರು.
''ನಾನು ಬಿಜೆಪಿಯ ಶಾಸಕನಾಗಿದ್ದು, ಇಲ್ಲಿ ಶಾಸಕನಾಗಿ ಉಳಿಯುತ್ತೇನೆ. ಆದರೆ, ಕಾದು ನೋಡೋಣ. ಮುಂದೆ ಬದಲಾದ ರಾಜಕಾರಣ ಏನು ಮಾಡಬೇಕು ಎಂಬುದರ ಬಗ್ಗೆ ಚಿಂತಿಸುತ್ತೇನೆ ಎಂದೂ ಸಹ ಪ್ರತಿಕ್ರಿಯಿಸಿದರು. ಇದೇ ವೇಳೆ ಪಾಕಿಸ್ತಾನ ಕುರಿತ ಘೋಷಣೆಗೆ ಸಂಬಂಧಿಸಿದ ಪ್ರತಿಕ್ರಿಯಿಸಿ, ''ಇದನ್ನು ಯಾರೇ ಹೇಳಿದ್ದರೂ ಖಂಡನೀಯ'' ಎಂದರು.
Shivaram Hebbar says will not betray BJP party, give health reason. BJP MLA Shivaram Hebbar, also a former minister, abstained from voting, embarrassing the party leadership in the state.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm