ಬ್ರೇಕಿಂಗ್ ನ್ಯೂಸ್
28-02-24 07:23 pm HK News Desk ಕರ್ನಾಟಕ
ಶಿರಸಿ, ಫೆ 28: ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ. ''ಮಂಗಳವಾರ ಮುಂಜಾನೆಯಿಂದ ತಮ್ಮ ಆರೋಗ್ಯದಲ್ಲಿ ಏರುಪೇರು ಆಗಿತ್ತು. ವೈದ್ಯರ ಸಲಹೆಯ ಮೇರೆಗೆ ನಾನು ಮತದಾನಕ್ಕೆ ಹೋಗಲು ಸಾಧ್ಯವಾಗಲಿಲ್ಲ'' ಎಂದು ಸ್ಪಷ್ಟಪಡಿಸಿದರು.
ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ , ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗಲ್ಲ ,ಅನಾರೋಗ್ಯದಿಂದ ಭಾಗವಹಿಸಿಲ್ಲ ಅಷ್ಟೇ ; ಶಾಸಕ ಹೆಬ್ಬಾರ್
ಈ ಕುರಿತು ಯಲ್ಲಾಪುರದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಹೆಬ್ಬಾರ್, ''ಆಸ್ಪತ್ರೆಯಲ್ಲೇ ಸಮಯ ಕಳೆದು ಹೋಯಿತು. ಅದಕ್ಕೆ ರಾಜ್ಯಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಎಲ್ಲವನ್ನು ಎದುರಿಸಲು ಸಿದ್ಧ. ಕಾನೂನು ಹೋರಾಟ ಆಗಿರಲಿ ಅಥವಾ ರಾಜಕೀಯ ವಿಷಯ ಆಗಲಿ'' ಎಂದು ಖಡಕ್ ಆಗಿ ಹೇಳಿದರು.
ಪಕ್ಷದ ಮೇಲೆ ಅಸಮಾಧಾನ ಇದೆ- ಹೆಬ್ಬಾರ್: '
'ತನಗೆ ಬಿಜೆಪಿ ಮೇಲೆ ಅಸಮಾಧಾನ ಇದೆ. ತನ್ನನ್ನು ಸ್ಥಳೀಯ ಬಿಜೆಪಿ ನಾಯಕರು ಸೋಲಿಸಲು ಪ್ರಯತ್ನ ಪಟ್ಟರು. ಇದನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. ಆದ್ರೆ, ಯಾವುದೇ ಕ್ರಮ ಆಗಿಲ್ಲ'' ಎಂದ ಹೆಬ್ಬಾರ್ ಅವರು, ''ಸದ್ಯ ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಹೋಗಲ್ಲ. ಬಿಜೆಪಿಗೆ ರಾಜೀನಾಮೆ ಕೊಡುವ ಪ್ರಮೇಯ ಬಂದಿಲ್ಲ. ನನಗೆ ಪಕ್ಷದ ಮೇಲೆ ಅಸಮಾಧಾನ ಇದೆ. ನನ್ನನ್ನು ಸೋಲಿಸಲು ಮುಂದಾದವರನ್ನೇ ಪೋಷಿಸಲಾಗುತ್ತಿದೆ'' ಎಂದು ಆರೋಪಿಸಿದರು. ಆದ್ರೆ, ಕಾಂಗ್ರೆಸ್ ಸೇರ್ಪಡೆ ವಿಚಾರವನ್ನು ಶಿವರಾಮ್ ಹೆಬ್ಬಾರ್ ತಳ್ಳಿಹಾಕಿದರು.
''ನಾನು ಬಿಜೆಪಿಯ ಶಾಸಕನಾಗಿದ್ದು, ಇಲ್ಲಿ ಶಾಸಕನಾಗಿ ಉಳಿಯುತ್ತೇನೆ. ಆದರೆ, ಕಾದು ನೋಡೋಣ. ಮುಂದೆ ಬದಲಾದ ರಾಜಕಾರಣ ಏನು ಮಾಡಬೇಕು ಎಂಬುದರ ಬಗ್ಗೆ ಚಿಂತಿಸುತ್ತೇನೆ ಎಂದೂ ಸಹ ಪ್ರತಿಕ್ರಿಯಿಸಿದರು. ಇದೇ ವೇಳೆ ಪಾಕಿಸ್ತಾನ ಕುರಿತ ಘೋಷಣೆಗೆ ಸಂಬಂಧಿಸಿದ ಪ್ರತಿಕ್ರಿಯಿಸಿ, ''ಇದನ್ನು ಯಾರೇ ಹೇಳಿದ್ದರೂ ಖಂಡನೀಯ'' ಎಂದರು.
Shivaram Hebbar says will not betray BJP party, give health reason. BJP MLA Shivaram Hebbar, also a former minister, abstained from voting, embarrassing the party leadership in the state.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm