ಬ್ರೇಕಿಂಗ್ ನ್ಯೂಸ್
29-02-24 09:51 am Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ರಾಜ್ಯದಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ಬಿಟ್ ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಮತ್ತೊಬ್ಬ ಇನ್ಸ್ ಪೆಕ್ಟರ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಕಡೂರು ಪೊಲೀಸ್ ತರಬೇತಿ ಶಾಲೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಲಕ್ಷ್ಮೀಕಾಂತಯ್ಯ ಬಂಧಿತ. ಬಿಟ್ ಕಾಯಿನ್ ಹಗರಣದ ತನಿಖೆ ನಡೆಯುತ್ತಿದ್ದಾಗ ಲಕ್ಷ್ಮೀಕಾಂತಯ್ಯ ಬೆಂಗಳೂರು ಸಿಸಿಬಿ ತನಿಖಾಧಿಕಾರಿ ಆಗಿ ಕರ್ತವ್ಯದಲ್ಲಿದ್ದರು.
ಹಗರಣದ ತನಿಖೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅದರಂತೆ ಬುಧವಾರ ವಿಚಾರಣೆಗೆ ಹಾಜರಾಗಿದ್ದ ಲಕ್ಷ್ಮೀ ಕಾಂತಯ್ಯ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ 1ನೇ ಎಸಿ ಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಕೆಲ ದಿನಗಳ ಹಿಂದೆ ಇದೇ ಬಿಟ್ ಕಾಯಿನ್ ಹಗರಣ ಸಂಬಂಧ ಇನ್ಸ್ಪೆಕ್ಟರ್ ಪ್ರಶಾಂತ್ಬಾಬು ಮತ್ತು ಸೈಬರ್ ತಜ್ಞ ಸಂತೋ ಷ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಇದರ ಬೆನ್ನಲ್ಲೇ ವಾರದ ಹಿಂದೆ ಸಿಸಿಬಿ ಮುಖ್ಯಸ್ಥರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಲಾಗಿತ್ತು. ಇದೀಗ ಆರೋಪಿಯೆಂದು ಗುರುತಿಸಿರುವ ಲಕ್ಷ್ಮೀಕಾಂತಯ್ಯ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
2019-20ರ ಅವಧಿಯಲ್ಲಿ ಬೆಳಕಿಗೆ ಬಂದ ಬಿಟ್ ಕಾಯಿನ್ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ತನಿಖಾಧಿಕಾರಿಗಳಾಗಿದ್ದ ಇನ್ಸ್ಪೆಕ್ಟರ್ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ, ಚಂದ್ರಾಧರ ಹಾಗೂ ಶ್ರೀಧರ್ ಕೆ.ಪೂಜಾರ್ ಹಾಗೂ ಎಚ್ಎಸ್ ಆರ್ ಲೇಔಟ್ನ ಜಿಸಿಐಡಿ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ನ ಸಿಇಒ ಎಸ್. ಸಂತೋಷ್ ಕುಮಾರ್ ವಿರುದ್ಧ ಸಾಕ್ಷ್ಯಾ ಧಾರಗಳ ನಾಶ ಆರೋಪದಡಿ ಎಸ್ಐಟಿ ಎಫ್ಐಆರ್ ದಾಖಲಿಸಿತ್ತು.ಈ ಅಧಿಕಾರಿಗಳಿಗೆ ಆಗ ಆಡಳಿತದಲ್ಲಿದ್ದ ಬಿಜೆಪಿಯ ಪ್ರಭಾವಿ ರಾಜಕಾರಣಿಗಳು, ಅವರ ಚೇಲಾಗಳು, ಪುತ್ರರು ಸಾಥ್ ನೀಡಿದ್ದು ಬಿಟ್ ಕಾಯಿನ್ ಹಗರಣದಲ್ಲಿ ಪಾಲು ಪಡೆದಿದ್ದಾರೆ ಎನ್ನಲಾಗಿದೆ.
The Special Investigation Team (SIT) probing the bitcoin scam has arrested another inspector and interrogated him. Lakshmikanthaiah, who was an inspector at Kadur police training school, was arrested. Lakshmikanthaiah was on duty as the investigating officer of the CCB in Bengaluru when the bitcoin scam was being investigated.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm