ಬ್ರೇಕಿಂಗ್ ನ್ಯೂಸ್
29-02-24 08:38 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ಮಾಜಿ ಐಎಎಸ್ ಅಧಿಕಾರಿ ಹಾಗೂ ಚಿತ್ರನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್(71) ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಲ್ಪಕಾಲದ ಅನಾರೋಗ್ಯದ ಬಳಿಕ ಹೃದಯಾಘಾತಕ್ಕೀಡಾಗಿ ಗುರುವಾರ ನಿಧನರಾದರು.
ಅನಾರೋಗ್ಯದ ಕಾರಣದಿಂದ ಕಳೆದ 25 ದಿನಗಳಿಂದ ಎಚ್ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ. ಶಿವರಾಮು ಇಂದು ಸಂಜೆ 4-15ರ ಸುಮಾರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಅಳಿಯ, ನಟ ಪ್ರದೀಪ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದರು.
![]()


ಮೂಲತಃ ರಾಮನಗರ ಜಿಲ್ಲೆಯವರಾದ ಶಿವರಾಮ್ ಬೆಳೆದಿದ್ದು ಬೆಂಗಳೂರಿನಲ್ಲಿ. ಬಡ ಕುಟುಂಬದಿಂದ ಬಂದಿದ್ದ ಅವರು ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಾಡಿ, ನಂತರ ಟೈಪಿಂಗ್ ಮತ್ತು ಶಾರ್ಟ್ ಹ್ಯಾಂಡ್ ಮುಗಿಸಿ 1972ರಲ್ಲಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಮಾರನೇ ವರ್ಷವೇ ಪೊಲೀಸ್ ಇಲಾಖೆ ಗುಪ್ತಚರ ವಿಭಾಗದಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸ ಮಾಡುತ್ತಲೇ ದೂರ ಶಿಕ್ಷಣ ಮೂಲಕ ಬಿಎ ಮತ್ತು ಎಂಎ ಡಿಗ್ರಿ ಪಡೆದು 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಡಿಎಸ್ ಪಿ ಆಗಿ ಭಡ್ತಿ ಪಡೆದಿದ್ದರು. 1986ರಲ್ಲಿ ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಪಾಸಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.




![]()

1993ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮ್ಯೂಸಿಕಲ್ ಮತ್ತು ರೋಮ್ಯಾಂಟಿಕ್ ಚಿತ್ರ 'ಬಾ ನಲ್ಲೆ ಮಧುಚಂದ್ರಿಕೆ' ಮೂಲಕ ಯಶಸ್ವಿ ನಾಯಕ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿದ್ದರು. ಇದರ ಬಳಿಕ ‘ವಸಂತ ಕಾವ್ಯ’, ‘ಸಾಂಗ್ಲಿಯಾನ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರಗಳು ಯಶಸ್ಸು ತಂದುಕೊಡಲಿಲ್ಲ. ಬಳಿಕ ನಟನೆಯಿಂದ ದೂರವಿದ್ದ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರ ಕಾಂಗ್ರೆಸ್ ಪಕ್ಷ, ಬಳಿಕ ಜೆಡಿಎಸ್ ಸೇರಿ 2014 ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಿಂದ ಸ್ಪರ್ಧಿಸಿದ್ದರು. ಆನಂತರ, ಬಿಜೆಪಿ ಸೇರ್ಪಡೆಯಾಗಿದ್ದರು.
Renowned bureaucrat-turned-actor K.Shivaram passed away on Thursday, at the age of 71. K Shivram was not keeping well from past few days and was undergoing treatment at HCG Hospital.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm