ಬ್ರೇಕಿಂಗ್ ನ್ಯೂಸ್
29-02-24 08:38 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ಮಾಜಿ ಐಎಎಸ್ ಅಧಿಕಾರಿ ಹಾಗೂ ಚಿತ್ರನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್(71) ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಲ್ಪಕಾಲದ ಅನಾರೋಗ್ಯದ ಬಳಿಕ ಹೃದಯಾಘಾತಕ್ಕೀಡಾಗಿ ಗುರುವಾರ ನಿಧನರಾದರು.
ಅನಾರೋಗ್ಯದ ಕಾರಣದಿಂದ ಕಳೆದ 25 ದಿನಗಳಿಂದ ಎಚ್ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ. ಶಿವರಾಮು ಇಂದು ಸಂಜೆ 4-15ರ ಸುಮಾರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಅಳಿಯ, ನಟ ಪ್ರದೀಪ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದರು.
![]()


ಮೂಲತಃ ರಾಮನಗರ ಜಿಲ್ಲೆಯವರಾದ ಶಿವರಾಮ್ ಬೆಳೆದಿದ್ದು ಬೆಂಗಳೂರಿನಲ್ಲಿ. ಬಡ ಕುಟುಂಬದಿಂದ ಬಂದಿದ್ದ ಅವರು ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಾಡಿ, ನಂತರ ಟೈಪಿಂಗ್ ಮತ್ತು ಶಾರ್ಟ್ ಹ್ಯಾಂಡ್ ಮುಗಿಸಿ 1972ರಲ್ಲಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಮಾರನೇ ವರ್ಷವೇ ಪೊಲೀಸ್ ಇಲಾಖೆ ಗುಪ್ತಚರ ವಿಭಾಗದಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸ ಮಾಡುತ್ತಲೇ ದೂರ ಶಿಕ್ಷಣ ಮೂಲಕ ಬಿಎ ಮತ್ತು ಎಂಎ ಡಿಗ್ರಿ ಪಡೆದು 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಡಿಎಸ್ ಪಿ ಆಗಿ ಭಡ್ತಿ ಪಡೆದಿದ್ದರು. 1986ರಲ್ಲಿ ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಪಾಸಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.




![]()

1993ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮ್ಯೂಸಿಕಲ್ ಮತ್ತು ರೋಮ್ಯಾಂಟಿಕ್ ಚಿತ್ರ 'ಬಾ ನಲ್ಲೆ ಮಧುಚಂದ್ರಿಕೆ' ಮೂಲಕ ಯಶಸ್ವಿ ನಾಯಕ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿದ್ದರು. ಇದರ ಬಳಿಕ ‘ವಸಂತ ಕಾವ್ಯ’, ‘ಸಾಂಗ್ಲಿಯಾನ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರಗಳು ಯಶಸ್ಸು ತಂದುಕೊಡಲಿಲ್ಲ. ಬಳಿಕ ನಟನೆಯಿಂದ ದೂರವಿದ್ದ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರ ಕಾಂಗ್ರೆಸ್ ಪಕ್ಷ, ಬಳಿಕ ಜೆಡಿಎಸ್ ಸೇರಿ 2014 ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಿಂದ ಸ್ಪರ್ಧಿಸಿದ್ದರು. ಆನಂತರ, ಬಿಜೆಪಿ ಸೇರ್ಪಡೆಯಾಗಿದ್ದರು.
Renowned bureaucrat-turned-actor K.Shivaram passed away on Thursday, at the age of 71. K Shivram was not keeping well from past few days and was undergoing treatment at HCG Hospital.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm