ಬ್ರೇಕಿಂಗ್ ನ್ಯೂಸ್
29-02-24 08:38 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ಮಾಜಿ ಐಎಎಸ್ ಅಧಿಕಾರಿ ಹಾಗೂ ಚಿತ್ರನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್(71) ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಲ್ಪಕಾಲದ ಅನಾರೋಗ್ಯದ ಬಳಿಕ ಹೃದಯಾಘಾತಕ್ಕೀಡಾಗಿ ಗುರುವಾರ ನಿಧನರಾದರು.
ಅನಾರೋಗ್ಯದ ಕಾರಣದಿಂದ ಕಳೆದ 25 ದಿನಗಳಿಂದ ಎಚ್ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ. ಶಿವರಾಮು ಇಂದು ಸಂಜೆ 4-15ರ ಸುಮಾರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಅಳಿಯ, ನಟ ಪ್ರದೀಪ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದರು.
![]()


ಮೂಲತಃ ರಾಮನಗರ ಜಿಲ್ಲೆಯವರಾದ ಶಿವರಾಮ್ ಬೆಳೆದಿದ್ದು ಬೆಂಗಳೂರಿನಲ್ಲಿ. ಬಡ ಕುಟುಂಬದಿಂದ ಬಂದಿದ್ದ ಅವರು ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಾಡಿ, ನಂತರ ಟೈಪಿಂಗ್ ಮತ್ತು ಶಾರ್ಟ್ ಹ್ಯಾಂಡ್ ಮುಗಿಸಿ 1972ರಲ್ಲಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಮಾರನೇ ವರ್ಷವೇ ಪೊಲೀಸ್ ಇಲಾಖೆ ಗುಪ್ತಚರ ವಿಭಾಗದಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸ ಮಾಡುತ್ತಲೇ ದೂರ ಶಿಕ್ಷಣ ಮೂಲಕ ಬಿಎ ಮತ್ತು ಎಂಎ ಡಿಗ್ರಿ ಪಡೆದು 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಡಿಎಸ್ ಪಿ ಆಗಿ ಭಡ್ತಿ ಪಡೆದಿದ್ದರು. 1986ರಲ್ಲಿ ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಪಾಸಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.




![]()

1993ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮ್ಯೂಸಿಕಲ್ ಮತ್ತು ರೋಮ್ಯಾಂಟಿಕ್ ಚಿತ್ರ 'ಬಾ ನಲ್ಲೆ ಮಧುಚಂದ್ರಿಕೆ' ಮೂಲಕ ಯಶಸ್ವಿ ನಾಯಕ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿದ್ದರು. ಇದರ ಬಳಿಕ ‘ವಸಂತ ಕಾವ್ಯ’, ‘ಸಾಂಗ್ಲಿಯಾನ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರಗಳು ಯಶಸ್ಸು ತಂದುಕೊಡಲಿಲ್ಲ. ಬಳಿಕ ನಟನೆಯಿಂದ ದೂರವಿದ್ದ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರ ಕಾಂಗ್ರೆಸ್ ಪಕ್ಷ, ಬಳಿಕ ಜೆಡಿಎಸ್ ಸೇರಿ 2014 ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಿಂದ ಸ್ಪರ್ಧಿಸಿದ್ದರು. ಆನಂತರ, ಬಿಜೆಪಿ ಸೇರ್ಪಡೆಯಾಗಿದ್ದರು.
Renowned bureaucrat-turned-actor K.Shivaram passed away on Thursday, at the age of 71. K Shivram was not keeping well from past few days and was undergoing treatment at HCG Hospital.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm