ಬ್ರೇಕಿಂಗ್ ನ್ಯೂಸ್
29-02-24 08:38 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ಮಾಜಿ ಐಎಎಸ್ ಅಧಿಕಾರಿ ಹಾಗೂ ಚಿತ್ರನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್(71) ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಲ್ಪಕಾಲದ ಅನಾರೋಗ್ಯದ ಬಳಿಕ ಹೃದಯಾಘಾತಕ್ಕೀಡಾಗಿ ಗುರುವಾರ ನಿಧನರಾದರು.
ಅನಾರೋಗ್ಯದ ಕಾರಣದಿಂದ ಕಳೆದ 25 ದಿನಗಳಿಂದ ಎಚ್ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ. ಶಿವರಾಮು ಇಂದು ಸಂಜೆ 4-15ರ ಸುಮಾರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಅಳಿಯ, ನಟ ಪ್ರದೀಪ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದರು.
ಮೂಲತಃ ರಾಮನಗರ ಜಿಲ್ಲೆಯವರಾದ ಶಿವರಾಮ್ ಬೆಳೆದಿದ್ದು ಬೆಂಗಳೂರಿನಲ್ಲಿ. ಬಡ ಕುಟುಂಬದಿಂದ ಬಂದಿದ್ದ ಅವರು ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಾಡಿ, ನಂತರ ಟೈಪಿಂಗ್ ಮತ್ತು ಶಾರ್ಟ್ ಹ್ಯಾಂಡ್ ಮುಗಿಸಿ 1972ರಲ್ಲಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಮಾರನೇ ವರ್ಷವೇ ಪೊಲೀಸ್ ಇಲಾಖೆ ಗುಪ್ತಚರ ವಿಭಾಗದಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸ ಮಾಡುತ್ತಲೇ ದೂರ ಶಿಕ್ಷಣ ಮೂಲಕ ಬಿಎ ಮತ್ತು ಎಂಎ ಡಿಗ್ರಿ ಪಡೆದು 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಡಿಎಸ್ ಪಿ ಆಗಿ ಭಡ್ತಿ ಪಡೆದಿದ್ದರು. 1986ರಲ್ಲಿ ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಪಾಸಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.
1993ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮ್ಯೂಸಿಕಲ್ ಮತ್ತು ರೋಮ್ಯಾಂಟಿಕ್ ಚಿತ್ರ 'ಬಾ ನಲ್ಲೆ ಮಧುಚಂದ್ರಿಕೆ' ಮೂಲಕ ಯಶಸ್ವಿ ನಾಯಕ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿದ್ದರು. ಇದರ ಬಳಿಕ ‘ವಸಂತ ಕಾವ್ಯ’, ‘ಸಾಂಗ್ಲಿಯಾನ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರಗಳು ಯಶಸ್ಸು ತಂದುಕೊಡಲಿಲ್ಲ. ಬಳಿಕ ನಟನೆಯಿಂದ ದೂರವಿದ್ದ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರ ಕಾಂಗ್ರೆಸ್ ಪಕ್ಷ, ಬಳಿಕ ಜೆಡಿಎಸ್ ಸೇರಿ 2014 ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಿಂದ ಸ್ಪರ್ಧಿಸಿದ್ದರು. ಆನಂತರ, ಬಿಜೆಪಿ ಸೇರ್ಪಡೆಯಾಗಿದ್ದರು.
Renowned bureaucrat-turned-actor K.Shivaram passed away on Thursday, at the age of 71. K Shivram was not keeping well from past few days and was undergoing treatment at HCG Hospital.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm