ಬ್ರೇಕಿಂಗ್ ನ್ಯೂಸ್
01-03-24 10:50 am Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪದ ಘಟನೆಯ ಬಗ್ಗೆ ವಿಧಿವಿಜ್ಞಾನ ತಂಡ ವರದಿ ತಯಾರಿಸಿದ್ದು, ಪೊಲೀಸರ ಕೈಸೇರಿದ ಬೆನ್ನಲ್ಲೇ ವಿಡಿಯೋದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ವಿವಾದಿತ ವಿಡಿಯೋದಲ್ಲಿರುವ ಅಂಶಗಳ ಬಗ್ಗೆ ಎಫ್ಎಸ್ಎಲ್ ನೀಡಿರುವ ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಗುರುವಾರ ಎಫ್ಎಸ್ಎಲ್ ವರದಿ ಕೈಸೇರಿದ ಕೂಡಲೇ ಪೊಲೀಸರು ಹಾವೇರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಂಗಳೂರು ಕೇಂದ್ರ ವಿಭಾಗದ ಎಸಿಪಿಯ ಮುಂದೆ ಶರಣಾಗಿದ್ದಾನೆ. ಬೇರೆ ಜಿಲ್ಲೆಗಳಲ್ಲೂ ಇನ್ನಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಯುವಕರು, ಅಂದು ರಾಜ್ಯಸಭೆ ಸದಸ್ಯರ ಜೊತೆಗೆ ವಿಧಾನಸೌಧ ಪ್ರವೇಶ ಮಾಡಿದ್ದ ಹಲವರನ್ನು ವಶಕ್ಕೆ ಪಡೆದು ಪೊಲೀಸರು ಡ್ರಿಲ್ ಮಾಡಿದ್ದಾರೆ. ಯುವಕರು ತಮ್ಮ ಘೋಷಣೆಯ ಬಗ್ಗೆ ಭಿನ್ನ ಹೇಳಿಕೆ ನೀಡಿದ್ದಾರೆ. ನಾಸೀರ್ ಖಾನ್ ಜಿಂದಾಬಾದ್ ಎಂದಷ್ಟೇ ಕೂಗಿದ್ದು ಎಂದು ಹೇಳಿದ್ದಾರೆ. ಗದ್ದಲದಲ್ಲಿ ನಮಗೇನೂ ಅಂತಹದ್ದು ಕೇಳಿಸಿಯೇ ಇಲ್ಲ ಎಂದೂ ಹೇಳಿದ್ದಾರೆ. ಹೀಗಾಗಿ ಕೂಲಂಕಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.
ಫೆ.27ರಂದು ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
Bangalore Four taken to custody over shouting Pakistan Zindabad slogan. A day after supporters of Rajya Sabha winner from Congress, Syed Nasir Hussain, allegedly raised “Pakistan Zindabad” slogans in the corridors of the Vidhana Soudha, the BJP on Wednesday demanded the resignation of Chief Minister Siddaramaiah
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm