ಬ್ರೇಕಿಂಗ್ ನ್ಯೂಸ್
01-03-24 06:43 pm HK News Desk ಕರ್ನಾಟಕ
ಮೈಸೂರು, ಮಾ 01: ಕುಣಿಯಲಾರದವಳು ನೆಲ ಡೊಂಕು ಎಂನ್ನುವಂತೆ ಎಂಬ ಸ್ಥಿತಿ ರಾಜ್ಯ ಸರಕಾರದ್ದು. ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಬೆರಳು ತೋರುತ್ತಿದೆ. ಜನರು ಸರಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯಕ್ಕೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಸಿಎಂ ಆರೋಪಿಸಿದ್ದಾರೆ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರ ಕೊಟ್ಟಿದ್ದೆಂದು ತಾಯಿ ಚಾಮುಂಡಿ ದೇವಿ ಮುಂದೆ ಪ್ರಮಾಣ ಮಾಡುತ್ತೇನೆ. ನೀವು ಬನ್ನಿ ಅದು ನಿಮ್ಮದೆ ಅಕ್ಕಿ ಎಂದು ಪ್ರಮಾಣ ಮಾಡಿ. ನೀವೇ ಪ್ರಮಾಣದ ದಿನ ನಿಗದಿ ಮಾಡಿ. ನೀವು ಕರೆದ ದಿನ ನಾನು ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ ಎಂದು ಸವಾಲೆಸೆದರು.
ಮೋದಿ ಸರಕಾರ ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ ತೆರಿಗೆ, ವಂತಿಗೆ ಮತ್ತು ಅನುದಾನದ ಹೆಸರಿನಲ್ಲಿ 4 ಲಕ್ಷ 91 ಸಾವಿರ ಕೋಟಿ ಕೊಟ್ಟಿದೆ. 10 ವರ್ಷದಲ್ಲಿ ಮನಮೋಹನ್ ಸಿಂಗ್ ಸರಕಾರ ತೆರಿಗೆ, ವಂತಿಗೆ ಮತ್ತು ಅನುದಾನದ ಹೆಸರಿನಲ್ಲಿ 1 ಲಕ್ಷ 92 ಸಾವಿರ ಕೋಟಿ ಕೊಟ್ಟಿದೆ. ಇದು ಸತ್ಯ ಎಂದು ನಮ್ಮ ಎಲ್ಲಾ ಸಂಸದರನ್ನು ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಬಂದು ಪ್ರಮಾಣ ಮಾಡುತ್ತೇವೆ. ಸಿಎಂ ಕೂಡ ತನ್ನ ಸಚಿವ ಸಂಪುಟದ ಜೊತೆ ಬಂದು ತಾವು ಹೇಳುತ್ತಿರುವುದು ಸತ್ಯ ಎಂದು ಪ್ರಮಾಣ ಮಾಡಲಿ ಎಂದರು.
ಕಾಂಗ್ರೆಸ್ ಕೃಪಾಪೋಷಿತ ಮಂಡಳಿ ನೀಡಿರುವ ಜಾತಿ ಗಣತಿ ವರದಿಯಿದು. ಜಾತಿಗಳ ನಡುವೆ ಎತ್ತಿಕಟ್ಟಲು ಈ ವರದಿ ಸಿದ್ಧ ಮಾಡಿಸಲಾಗಿದೆ. ಹಿಂದೂ ಸಮಾಜವನ್ನು ಜಾತಿ ಜಾತಿ ಹೆಸರಿನಲ್ಲಿ ಹೊಡೆಯಲು ಈ ತಂತ್ರ. ಹಿಂದೂ ಎಂಬ ಭಾವದಲ್ಲಿ ಜನ ಮತ ಹಾಕಬಾರದು ಎಂಬ ರಾಜಕೀಯ ಸಂಚಿನ ಭಾಗವಾಗಿ ಈ ವರದಿಯಿದೆ. ಕಾಂಗ್ರೆಸ್ ನ ಟೂಲ್ ಕಿಟ್ ನ ಭಾಗವಾಗಿ ಈ ವರದಿ ಇದೆ ಎಂದು ಕಿಡಿಕಾರಿದರು.
ಪಾಕಿಸ್ತಾನ್ ಪರ ಘೋಷಣೆ ವಿಚಾರಕ್ಕೆ ಮಾತನಾಡಿ, ನನ್ನ ಮಾಹಿತಿ ಪ್ರಕಾರ ಎಫ್ಎಸ್ಎಲ್ ರಿಪೋರ್ಟ್ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ಸತ್ಯ ಎಂಬುದಿದೆ. ಸರಕಾರ ತಕ್ಷಣ ಈ ವರದಿ ಬಹಿರಂಗ ಪಡಿಸಬೇಕು. ನಾಲ್ವರನ್ನು ಪೊಲೀಸರು ವಿಚಾರಣೆ ಮಾಡ್ತಿದ್ದಾರೋ ಅಥವಾ ಬಿರಿಯಾನಿ ತಿನ್ನಿಸುತ್ತಿದ್ದಾರೋ? ಮುಸ್ಲಿಮರನ್ನ ಬ್ರದರ್ಸ್ ಅಂತಾ ಡಿಕೆಶಿಯೆ ಹೇಳಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಕೊಟ್ಟರೂ ಅಚ್ಚರಿ ಬೇಡ
Pakistan Zindabad, Ct Ravi slams Dk Shivakumar, says they might be eating biryani inside, says no wonder if they get biryani inside. He also slammed About the 5kg rice given by Siddaramaiah.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm