ಬ್ರೇಕಿಂಗ್ ನ್ಯೂಸ್
01-03-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಘಟನೆಗೆ ಬಾಂಬ್ ಕಾರಣ ಎಂಬುದು ಎಫ್ಎಸ್ಎಲ್ ತನಿಖೆಯಲ್ಲಿ ದೃಢಪಟ್ಟಿದೆ. ಗ್ರಾಹಕರ ಸೋಗಿನಲ್ಲಿ ಹೊಟೇಲಿಗೆ ಬಂದಿದ್ದ ವ್ಯಕ್ತಿಯೊಬ್ಬರು ಇಟ್ಟು ಹೋಗಿದ್ದ ಬ್ಯಾಗಿನಲ್ಲಿದ್ದ ಐಇಡಿ ಮಾದರಿಯ ಸ್ಫೋಟಕ ಬ್ಲಾಸ್ಟ್ ಆಗಿದೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಬಂದಿ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹೊಟೇಲ್ ಒಳಗಿನ ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗನ್ನು ಇಟ್ಟು ಹೋಗಿರುವುದು ಪತ್ತೆಯಾಗಿದೆ.
ಆರಂಭದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ ಆಗಿದೆಯೆಂದು ಹೇಳಲಾಗಿತ್ತು. ಅಗ್ನಿಶಾಮಕ ದಳ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳದವರು ಬಂದು ತನಿಖ ನಡೆಸಿದ್ದರು. ಸ್ಫೋಟಗೊಂಡ ಸ್ಥಳದಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಊಟಕ್ಕೆ ಕುಳಿತಿದ್ದ ಜಾಗದ ಅಡಿಭಾಗದಲ್ಲೇ ಬ್ಯಾಗ್ ಒಂದನ್ನು ಇಟ್ಟಿರುವುದು ಪತ್ತೆಯಾಗಿತ್ತು. ಬ್ಯಾಗಿನಲ್ಲಿದ್ದ ಯಾವುದೋ ಸ್ಫೋಟಕ ವಸ್ತು ಸ್ಫೋಟಗೊಂಡಿದೆ. ಆದರೆ ದೊಡ್ಡ ಮಟ್ಟದಲ್ಲಿ ಸ್ಫೋಟ ಆಗದೇ ಇದ್ದುದರಿಂದ ಹೆಚ್ಚಿನ ಅಪಾಯ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಘಟನೆ ಹಿನ್ನೆಲೆಯಲ್ಲಿ ತನಿಖೆಗೆ ಎನ್ಐಎ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಸ್ಥಳದಲ್ಲಿ ಎಡಿಜಿಪಿ ಅಲೋಕ್ ಮೋಹನ್ ಠಿಕಾಣಿ ಹೂಡಿದ್ದು, ಬಾಂಬ್ ಬ್ಲಾಸ್ಟ್ ಅನ್ನುವುದನ್ನು ದೃಢಪಡಿಸಿದ್ದಾರೆ. ಇದರ ಹಿಂದಿರುವ ಶಕ್ತಿಯನ್ನು ಪತ್ತೆ ಮಾಡುತ್ತೇವೆ. ಆದರೆ ಅದು ದೊಡ್ಡ ಮಟ್ಟದ ಸ್ಫೋಟ ಆಗಿರಲಿಲ್ಲ ಎಂದವರು ತಿಳಿಸಿದ್ದಾರೆ. ಐಇಡಿ ಸ್ಫೋಟಕ ವಸ್ತುವನ್ನು ಬಳಸಿರುವುದು ಕಂಡುಬಂದಿದೆ. ಈ ಹಿಂದೆಯೂ ಇಂತಹ ಬ್ಲಾಸ್ಟ್ ಆಗಿತ್ತು. ಇತ್ತೀಚಿನ ದಿನಗಳಲ್ಲಿ ಅಂತಹ ಸ್ಫೋಟ ಆಗಿರಲಿಲ್ಲ. ಕಳೆದ ಸರಕಾರ ಇದ್ದಾಗ ಮಂಗಳೂರಿನಲ್ಲಿ ಅದೇ ಮಾದರಿ ಸ್ಫೋಟ ಆಗಿತ್ತು ಎಂದವರು ಹಾರಿಕೆಯ ಉತ್ತರ ನೀಡಿದ್ದಾರೆ.
#Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister #Siddaramaiah said investigation is on to ascertain the cause and nature of the explosion at the popular #RameshwaramCafe in #Whitefiled pic.twitter.com/3KS4KTmJfW
— Headline Karnataka (@hknewsonline) March 1, 2024
Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister Siddaramaiah said investigation is on to ascertain the cause and nature of the explosion at the popular Rameshwaram Cafe in Whitefiled, and added it might have been caused by an "improvised explosive" device.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am