ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm