ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm