ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm