ಬ್ರೇಕಿಂಗ್ ನ್ಯೂಸ್
04-03-24 04:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ರಾಜ್ಯಸಭಾ ಚುನಾವಣೆಯ ದಿನ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯ ಎಫ್ಎಸ್ಎಲ್ ವರದಿಯನ್ನು ಬಿಜೆಪಿ ಹಾಕಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಖಾಸಗಿ ಸಂಸ್ಥೆಗಳನ್ನು ಇಟ್ಟುಕೊಂಡು ಖಾಸಗಿಯಾಗಿ ಫೋರೆನ್ಸಿಕ್ ವರದಿಗಳನ್ನು ತರಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡುವುದೇ ಮೊದಲನೇ ದೇಶದ್ರೋಹದ ಕೆಲಸ, ಇದು ಸಾಮಾನ್ಯ ಪ್ರಕರಣ ಅಲ್ಲ, ದೇಶದ್ರೋಹದ ಘೋಷಣೆ ಕೂಗಿದ್ದಾರೆ ಅಂತ ಹೇಳ್ತಾ ಇದ್ದಾರೆ. ಅದಕ್ಕೆ ಸರ್ಕಾರ ಉತ್ತರ ಕೊಡಬೇಕು. ಬಿಜೆಪಿಯವರು ಖಾಸಗಿ ಸಂಸ್ಥೆಗಳ ಹತ್ತಿರ ಹೋಗಿ ಅದನ್ನು ಪಬ್ಲಿಕ್ ಮಾಡ್ತಾ ಇದ್ದಾರಲ್ಲ, ಅದು ಮೊದಲನೇ ದೇಶದ್ರೋಹದ ಕೆಲಸ ಎಂದು ಕಿಡಿಕಾರಿದರು.
ಕ್ಲೂ ಫಾರ್ ಎವಿಡೆನ್ಸ್ ಫೋರೆನ್ಸಿಕ್ ಲ್ಯಾಬ್ ಅನ್ನೋ ಸಂಸ್ಥೆಯ ಕ್ರೆಡಿಬಿಲಿಟಿ ಏನು? ಇವರು ಖಾಸಗಿಯಾಗಿ ಏನಾದರೂ ಮಾಡಿಕೊಳ್ಳಲಿ. ಆ ಸಂಸ್ಥೆಗೆ ಸರ್ಕಾರದ ಸರ್ಟಿಫಿಕೇಶನ್ ಇದಿಯೋ ತರಬೇತಿ ಇದೆಯೋ ನನಗೆ ಗೊತ್ತಿಲ್ಲ ಎಂದ ಪ್ರಿಯಾಂಕ್ ಖರ್ಗೆ, ಇದ್ದರೂ ಕೂಡ ಆ ಲ್ಯಾಬ್ ಈ ವಿಚಾರದಲ್ಲಿ ಸ್ಥಳೀಯ ಪೊಲೀಸರಿಗೆ ಮತ್ತು ಸರ್ಕಾರದ ಗಮನಕ್ಕೆ ತಂದು ವರದಿ ಕೊಡಬೇಕಿತ್ತು. ಅಷ್ಟು ಮೆಚುರಿಟಿ ಸಂಸ್ಥೆಗೆ ಇರಬೇಕಾಗಿತ್ತು. ಬಿಜೆಪಿಯವರು ಫೋರೆನ್ಸಿಕ್ ಲ್ಯಾಬ್ಗೆ ಕೊಟ್ಟಿರುವ ಫೂಟೇಜ್ ಯಾವುದು?ಇಂಟರ್ನೆಟ್ನಲ್ಲಿ ವಿಡಿಯೋ ಕ್ವಾಲಿಟಿ ಸಪ್ರೆಸ್ ಆಗಿಯೇ ಆಗುತ್ತದೆ. ಯಾವ ಫೂಟೇಜ್ ಕೊಟ್ಟಿದ್ದಾರೆ ಮೊದಲನೇ ಪ್ರಶ್ನೆ, ರಾ ಫೂಟೇಜ್ ಕೊಟ್ಟಿದ್ರೆ ಇವರಿಗೆ ರಾ ಫೂಟೇಜ್ ಎಲ್ಲಿಂದ ಸಿಕ್ತು? ಎಂದು ಪ್ರಶ್ನಿಸಿದರು.
ಇನ್ನು, ಖಾಸಗಿಯಾಗಿ ಎಫ್ಎಸ್ಎಲ್ ವರದಿ ತಯಾರಿಸಿದ ಸಂವಾದ ಫೌಂಡೇಶನ್ಗೆ ಏನು ಆಸಕ್ತಿ ಹೂ ಆರ್ ದೇ? ಎಂದು ಪ್ರಶ್ನಿಸಿದ ಖರ್ಗೆ, ಸಂವಾದ ಸಂಸ್ಥೆ RSS ನವರ ಭಜನೆ ಆಡುವ ಸಂಸ್ಥೆ. ಇದು ಯಾವ ರೀತಿ ಸಾಮಾಜಿಕ ಜಾಲತಾಣದಲ್ಲಿ ಜಾತಿ ಜಾತಿಗಳ ನಡುವೆ ಜಗಳ ಹಚ್ಚುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೂ ಆರ್ ದೇ? ಫೂಟೇಜ್ ಕೊಡೋದಕ್ಕೆ ಲ್ಯಾಬ್ ಟೆಸ್ಟ್ ಮಾಡುವುದಕ್ಕೆ ಅವರು ಯಾರು? ಎಂದು ಪ್ರಶ್ನಿಸಿದರು.
ಇನ್ನು, ಸರ್ಕಾರ ಪದೇ ಪದೇ ಎಫ್ಎಸ್ಎಲ್ ರಿಪೋರ್ಟ್ ನೋಡುವುದಕ್ಕೆ ಕಾರಣ ಯಾವುದೇ ಗೊಂದಲ ಇರಬಾರದು ಅನ್ನೋದು ಎಂದ ಸಚಿವ ಪ್ರಿಯಾಂಕ ಖರ್ಗೆ, ಇವರು ಯಾವ ಫೂಟೇಜ್ ಕೊಟ್ಟಿದ್ದಾರೋ? ಮೂರು ತೆಗೆದುಕೊಂಡಿದ್ದಾರೋ ನೂರು ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಗೃಹ ಇಲಾಖೆ ಇದರ ಬಗ್ಗೆ ವರದಿ ಕೊಡಬೇಕೇ ಹೊರತು ಸಂವಾದ ಫೌಂಡೇಶನ್ ಅಲ್ಲ. ಬಿಜೆಪಿಯವರಿಗೆ ಜವಾಬ್ದಾರಿಯುತ ಪಕ್ಷವಾಗಿ ಸಂವಾದ ಹಾಕಿದ ತಾಳಕ್ಕೆ ಕುಣಿತಾರಲ್ಲ ಇವರಿಗೆ ನಾಚಿಕೆ ಬೇಡ್ವಾ? ಎಂದು ಹೀಯಾಳಿಸಿದರು.
Priyank kharge slams samvada foundation over fsl report of Pakistan zindabad twitted by BJP.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm