ಬ್ರೇಕಿಂಗ್ ನ್ಯೂಸ್
06-03-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ತನಿಖೆ ಕೈಗೆತ್ತಿಕೊಂಡ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಆರೋಪಿಯ ಸಿಸಿಟಿವಿ ಚಿತ್ರವನ್ನು ಮುಂದಿಟ್ಟು ಆತನ ಪತ್ತೆಗಾಗಿ ಹತ್ತು ಲಕ್ಷದ ಬಹುಮಾನ ಪ್ರಕಟಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ಕೊಟ್ಟವರಿಗೆ ಹತ್ತು ಲಕ್ಷ ನೀಡಲಾಗುವುದು. ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಆಮೂಲಕ ಎನ್ಐಎ ಅಧಿಕಾರಿಗಳು ಅಧಿಕೃತವಾಗಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ತನಿಖೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆ ಹೊಟೇಲಿನಲ್ಲಿ ಮಾ.1ರಂದು ಮಧ್ಯಾಹ್ನ ಆಗಂತುಕನೊಬ್ಬ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸ್ಫೋಟಕ ಟೈಮರ್ ಆಧರಿಸಿ ಸಿಡಿದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಯುವಕ ಬ್ಯಾಗನ್ನು ಬೇಸಿನ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಮತ್ತು ಅದರಲ್ಲಿ ಸ್ಫೋಟಕ ಸಾಮಗ್ರಿ ಬ್ಲಾಸ್ಟ್ ಆಗಿರುವುದು ಕಂಡುಬಂದಿತ್ತು. ಪೊಲೀಸರು ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ, ಯುವಕ ಬಿಎಂಟಿಸಿ ಬಸ್ಸಿನಲ್ಲೇ ಬಂದು ಹೋಗಿರುವುದು ದಾಖಲಾಗಿತ್ತು. ಘಟನೆ ಹಿಂದೆ ಭಯೋತ್ಪಾದಕ ಕೃತ್ಯದ ಬಗ್ಗೆ ಶಂಕೆಯಿದ್ದು, ಪೊಲೀಸರು ಹತ್ತು ತಂಡ ಕಟ್ಟಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಈತನಕವೂ ತನಿಖಾ ತಂಡಕ್ಕೆ ಯಾವುದೇ ಮಾಹಿತಿಯೂ ಸಿಕ್ಕಿಲ್ಲ.
ಈ ಹಿಂದೆ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿಯೂ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇಬ್ಬರಿಗೆ ತಲಾ 5 ಲಕ್ಷ, ಉಳಿದವರಿಗೆ ತಲಾ ಎರಡೂವರೆ ಲಕ್ಷದ ಬಹುಮಾನ ಪ್ರಕಟಿಸಲಾಗಿತ್ತು. ತಲೆಮರೆಸಿಕೊಂಡ ಐದು ಮಂದಿಯಲ್ಲಿ ಇಬ್ಬರು ಇನ್ನೂ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.
A day after taking over the probe into the Rameswaram café blast case, the National Investigation Agency (NIA) has released a cctv footage of the accused and announced a reward of Rs 10 lakh for his arrest.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am