ಬ್ರೇಕಿಂಗ್ ನ್ಯೂಸ್
06-03-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ತನಿಖೆ ಕೈಗೆತ್ತಿಕೊಂಡ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಆರೋಪಿಯ ಸಿಸಿಟಿವಿ ಚಿತ್ರವನ್ನು ಮುಂದಿಟ್ಟು ಆತನ ಪತ್ತೆಗಾಗಿ ಹತ್ತು ಲಕ್ಷದ ಬಹುಮಾನ ಪ್ರಕಟಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ಕೊಟ್ಟವರಿಗೆ ಹತ್ತು ಲಕ್ಷ ನೀಡಲಾಗುವುದು. ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಆಮೂಲಕ ಎನ್ಐಎ ಅಧಿಕಾರಿಗಳು ಅಧಿಕೃತವಾಗಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ತನಿಖೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆ ಹೊಟೇಲಿನಲ್ಲಿ ಮಾ.1ರಂದು ಮಧ್ಯಾಹ್ನ ಆಗಂತುಕನೊಬ್ಬ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸ್ಫೋಟಕ ಟೈಮರ್ ಆಧರಿಸಿ ಸಿಡಿದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಯುವಕ ಬ್ಯಾಗನ್ನು ಬೇಸಿನ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಮತ್ತು ಅದರಲ್ಲಿ ಸ್ಫೋಟಕ ಸಾಮಗ್ರಿ ಬ್ಲಾಸ್ಟ್ ಆಗಿರುವುದು ಕಂಡುಬಂದಿತ್ತು. ಪೊಲೀಸರು ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ, ಯುವಕ ಬಿಎಂಟಿಸಿ ಬಸ್ಸಿನಲ್ಲೇ ಬಂದು ಹೋಗಿರುವುದು ದಾಖಲಾಗಿತ್ತು. ಘಟನೆ ಹಿಂದೆ ಭಯೋತ್ಪಾದಕ ಕೃತ್ಯದ ಬಗ್ಗೆ ಶಂಕೆಯಿದ್ದು, ಪೊಲೀಸರು ಹತ್ತು ತಂಡ ಕಟ್ಟಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಈತನಕವೂ ತನಿಖಾ ತಂಡಕ್ಕೆ ಯಾವುದೇ ಮಾಹಿತಿಯೂ ಸಿಕ್ಕಿಲ್ಲ.
ಈ ಹಿಂದೆ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿಯೂ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇಬ್ಬರಿಗೆ ತಲಾ 5 ಲಕ್ಷ, ಉಳಿದವರಿಗೆ ತಲಾ ಎರಡೂವರೆ ಲಕ್ಷದ ಬಹುಮಾನ ಪ್ರಕಟಿಸಲಾಗಿತ್ತು. ತಲೆಮರೆಸಿಕೊಂಡ ಐದು ಮಂದಿಯಲ್ಲಿ ಇಬ್ಬರು ಇನ್ನೂ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.
A day after taking over the probe into the Rameswaram café blast case, the National Investigation Agency (NIA) has released a cctv footage of the accused and announced a reward of Rs 10 lakh for his arrest.
24-05-26 05:36 pm
HK News Desk
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 04:45 pm
HK News Staffer
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm