ಬ್ರೇಕಿಂಗ್ ನ್ಯೂಸ್
06-03-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ತನಿಖೆ ಕೈಗೆತ್ತಿಕೊಂಡ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಆರೋಪಿಯ ಸಿಸಿಟಿವಿ ಚಿತ್ರವನ್ನು ಮುಂದಿಟ್ಟು ಆತನ ಪತ್ತೆಗಾಗಿ ಹತ್ತು ಲಕ್ಷದ ಬಹುಮಾನ ಪ್ರಕಟಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ಕೊಟ್ಟವರಿಗೆ ಹತ್ತು ಲಕ್ಷ ನೀಡಲಾಗುವುದು. ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಆಮೂಲಕ ಎನ್ಐಎ ಅಧಿಕಾರಿಗಳು ಅಧಿಕೃತವಾಗಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ತನಿಖೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆ ಹೊಟೇಲಿನಲ್ಲಿ ಮಾ.1ರಂದು ಮಧ್ಯಾಹ್ನ ಆಗಂತುಕನೊಬ್ಬ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸ್ಫೋಟಕ ಟೈಮರ್ ಆಧರಿಸಿ ಸಿಡಿದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಯುವಕ ಬ್ಯಾಗನ್ನು ಬೇಸಿನ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಮತ್ತು ಅದರಲ್ಲಿ ಸ್ಫೋಟಕ ಸಾಮಗ್ರಿ ಬ್ಲಾಸ್ಟ್ ಆಗಿರುವುದು ಕಂಡುಬಂದಿತ್ತು. ಪೊಲೀಸರು ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ, ಯುವಕ ಬಿಎಂಟಿಸಿ ಬಸ್ಸಿನಲ್ಲೇ ಬಂದು ಹೋಗಿರುವುದು ದಾಖಲಾಗಿತ್ತು. ಘಟನೆ ಹಿಂದೆ ಭಯೋತ್ಪಾದಕ ಕೃತ್ಯದ ಬಗ್ಗೆ ಶಂಕೆಯಿದ್ದು, ಪೊಲೀಸರು ಹತ್ತು ತಂಡ ಕಟ್ಟಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಈತನಕವೂ ತನಿಖಾ ತಂಡಕ್ಕೆ ಯಾವುದೇ ಮಾಹಿತಿಯೂ ಸಿಕ್ಕಿಲ್ಲ.
ಈ ಹಿಂದೆ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿಯೂ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇಬ್ಬರಿಗೆ ತಲಾ 5 ಲಕ್ಷ, ಉಳಿದವರಿಗೆ ತಲಾ ಎರಡೂವರೆ ಲಕ್ಷದ ಬಹುಮಾನ ಪ್ರಕಟಿಸಲಾಗಿತ್ತು. ತಲೆಮರೆಸಿಕೊಂಡ ಐದು ಮಂದಿಯಲ್ಲಿ ಇಬ್ಬರು ಇನ್ನೂ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.
A day after taking over the probe into the Rameswaram café blast case, the National Investigation Agency (NIA) has released a cctv footage of the accused and announced a reward of Rs 10 lakh for his arrest.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm