Chikkodi letter to bomb ram mandir temple found: ಚಿಕ್ಕೋಡಿ ; ರಾಮ ಮಂದಿರ ಸ್ಪೋಟಿಸುವುದಾಗಿ ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ರ ಪತ್ತೆ, ಬೆಚ್ಚಿಬಿದ್ದ ಜನತೆ, ಬಿಗಿ ಪೊಲೀಸ್ ಭದ್ರತೆ 

09-03-24 03:24 pm       HK News Desk   ಕರ್ನಾಟಕ

ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.

ಚಿಕ್ಕೋಡಿ, ಮಾ.09: ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.

ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಇದೇ ರೀತಿಯ ಪತ್ರ ಸಿಕ್ಕಿರೋದು ಗೊತ್ತಾಗಿದೆ. 

ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿ.ಸಿ. ಟಿವಿ ಅಳವಡಿಸಲಾಗಿದೆ.

ಕೆಲ ದಿನಗಳ ಹಿಂದೆ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ​ಹಾಗೆ ಬಸ್ , ರೈಲು ನಿಲ್ದಾಣ ಸೇರಿದಂತೆ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

ಸರಿಯಾಗಿ ಎಂಟು ದಿನಗಳ ಹಿಂದೆ ಮಾರ್ಚ್​​ 01 ರಂದು ಬೆಂಗಳೂರಿನ ವೈಟ್​ಫೀಲ್ಡ್​ ಬಳಿಯ ಕುಂದಹಳ್ಳಿಯಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿತ್ತು. ಪ್ರಕರಣದ ತನಿಖೆಯನ್ನು ಎನ್​ಐಎ ಅಧಿಕಾರಿಗಳು ನಡೆಸುತ್ತಿತ್ತು, ಆರೋಪಿ ಜಾಡು ಹಿಡಿದು ಹೊರಟಿದ್ದಾರೆ. ಸದ್ಯ ಅಧಿಕಾರಿಗಳು ಆರೋಪಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ತಲಾಷ್​ ನಡೆಸಿದ್ದಾರೆ.

Chikkodi letter to bomb ram mandir temple found, high police security deployed. Police are now investigating the matter, the letter has been found in Hindi.