ಬ್ರೇಕಿಂಗ್ ನ್ಯೂಸ್
09-03-24 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.09: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಶಂಕಿತನ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ ಮಾಡಿದೆ.
ಮಾರ್ಚ್ 3ರಂದು ಪ್ರಕರಣದ ತನಿಖೆ ವಹಿಸಿಕೊಂಡಿರುವ ಎನ್ಐಎ, ಶಂಕಿತ ಓಡಾಡಿರುವ ಕೆಲವು ಭಾಗಗಳ ಸಿಸಿಟಿವಿ ಕ್ಯಾಮೆರಾ ವಿಡಿಯೋಗಳನ್ನು ಬಿಡುಗಡೆ ಮಾಡಿತ್ತು. ಈಗ ಅವುಗಳಲ್ಲಿ ಬಹುತೇಕ ಸ್ಪಷ್ಟವಾಗಿ ಗೋಚರಿಸುವ ಶಂಕಿತನ ಕೆಲವು ಚಿತ್ರಗಳನ್ನು ಬಿಡುಗಡೆ ಮಾಡಿದೆ
ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರಿಸಿದ್ದವನು ಎಂದು ನಂಬಲಾದ ಶಂಕಿತನನ್ನು ಪತ್ತೆ ಮಾಡಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಎನ್ಐಎ ಕೋರಿದೆ.
ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಅಂದಾಜು ಒಂದು ಗಂಟೆ ಬಳಿಕ ಪ್ರಮುಖ ಶಂಕಿತ ಉಗ್ರ ಬಿಎಂಟಿಸಿ ಬಸ್ ಒಂದನ್ನು ಹತ್ತುವುದು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿತ್ತು. ಸ್ಫೋಟವು ಮಾರ್ಚ್ 1ರಂದು ಮಧ್ಯಾಹ್ನ 12.56ಕ್ಕೆ ಸಂಭವಿಸಿದ್ದರೆ, ಅದೇ ದಿನ ಮಧ್ಯಾಹ್ನ 2.03ಕ್ಕೆ ಆತ ಬಿಎಂಟಿಸಿ ಬಸ್ ಹತ್ತುವುದು ಕಾಣಿಸಿದೆ. ಟಿ- ಶರ್ಟ್, ಟೊಪ್ಪಿ, ಮುಖಕ್ಕೆ ಮಾಸ್ಕ್ ಧರಿಸಿದ್ದ ಶಂಕಿತ, ಕೆಫೆಯಲ್ಲಿ ಐಇಡಿ ತುಂಬಿಸಿದ್ದ ಬ್ಯಾಗ್ ಇರಿಸಿ ಹೋಗುವುದು ಸಹ ಮತ್ತೊಂದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಅದೇ ದಿನ ರಾತ್ರಿ 9 ಗಂಟೆಗೆ ಬಸ್ ನಿಲ್ದಾಣವೊಂದರ ಒಳಗೆ ಶಂಕಿತ ಅಡ್ಡಾಡುವುದು ಇನ್ನೊಂದು ವಿಡಿಯೋದಲ್ಲಿ ದಾಖಲಾಗಿದೆ. ಈ ವೇಳೆ ಮಾಸ್ಕ್ ತೆಗೆದಿರುವ ಶಂಕಿತನನ್ನು ಸಹ ಪ್ರಯಾಣಿಕರು ಅಥವಾ ಇತರರು ಕಂಡಿರುವ ಸಾಧ್ಯತೆ ಇದೆ. ಆತನ ಗುರುತು ಪತ್ತೆ ಮಾಡಲು ಮತ್ತು ಬಂಧನಕ್ಕೆ ಸಹಾಯವಾಗುವ ಮಾಹಿತಿ ನೀಡುವವರಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಮಾಹಿತಿ ಕೊಟ್ಟವರ ವಿವರ ಗೋಪ್ಯವಾಗಿ ಇರಿಸುವುದಾಗಿ ಸಹ ತಿಳಿಸಿದೆ.


ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ದಳವು ತನಿಖೆಯಲ್ಲಿ ಎನ್ಐಎ ಜತೆ ಕೈ ಜೋಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ನಲ್ಲಿನ ಬಟ್ಟೆ ವ್ಯಾಪಾರಿ ಹಾಗೂ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ನಂಟು ಹೊಂದಿರುವ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ತನಿಖಾ ತಂಡದ ಪ್ರಕಾರ, ಶಂಕಿತ ಆರೋಪಿಯು ಘಟನೆ ಬಳಿಕ ತನ್ನ ಉಡುಪು ಬದಲಿಸಿಕೊಂಡಿದ್ದು, ವಿಭಿನ್ನ ಸ್ಥಳಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾನೆ. ತುಮಕೂರು, ಬಳ್ಳಾರಿ, ಬೀದರ್ ಮತ್ತು ಭಟ್ಕಳ ಸೇರಿದಂತೆ ಆತ ಹೋಗಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಪದೇ ಪದೇ ಸ್ಥಳ ಬದಲಾವಣೆ ಮಾಡಿದ್ದಾನೆ.
The National Investigation Agency (NIA), which is investigating Bengaluru’s Rameshwaram cafe blast case, has released new pictures of the suspect linked to the crime and sought public cooperation in identifying him. The investigation agency even said the informer's details would be kept secret.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm