ಬ್ರೇಕಿಂಗ್ ನ್ಯೂಸ್
09-03-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.9: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಜೆಡಿಎಸ್ ಸೀಟಿನ ಬಗ್ಗೆ ಮಹತ್ವದ ಚರ್ಚೆಯಾಗಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಅಥವಾ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ ಭಾನುವಾರವೇ ನವದೆಹಲಿಗೆ ತೆರಳಲಿದ್ದಾರೆ. ಜೆಡಿಎಸ್ಗೆ ನಾಲ್ಕು ಕ್ಷೇತ್ರಗಳೆಂಬುದು ಊಹಾಪೋಹ ಮಾತ್ರ. ಜೆಡಿಎಸ್ ಸಿದ್ಧತೆ ಗಮನಿಸಿದರೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳು ಬಹುತೇಕ ಫಿಕ್ಸ್ ಎಂಬಂತಿದೆ.
ಈಗಾಗಲೇ ಈ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಜೆಡಿಎಸ್ಗೆ 3ಕ್ಕಿಂತ ಹೆಚ್ಚು ಸೀಟು ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಹಾಸನ, ಮಂಡ್ಯ, ಕೋಲಾರ ಬಹುತೇಕ ಖಚಿತವಾಗಿದೆ. ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಇದಕ್ಕೆ ಸಮ್ಮತಿ ಇದ್ದು ತಮ್ಮದೇ ಒಬ್ಬರು ಬಿಜೆಪಿಯಲ್ಲಿ ನಿಲ್ಲುವ ಮೂಲಕ ಮತ್ತೊಂದು ಕ್ಷೇತ್ರ ಸಿಕ್ಕಂತೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ದೆಹಲಿ ಮೀಟಿಂಗಲ್ಲೂ ಮೂರಕ್ಕಿಂತ ಹೆಚ್ಚು ಸೀಟಿಗಾಗಿ ಚೌಕಾಶಿ ಮಾಡುವುದು ಡೌಟು ಎನ್ನಲಾಗುತ್ತಿದೆ.
The BJP-JD(S) seat-sharing talks for the Lok Sabha elections are in the final stages. The BJP central election committee meeting will be held in New Delhi on Sunday to discuss the JD(S) seat.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am