ಬ್ರೇಕಿಂಗ್ ನ್ಯೂಸ್
11-03-24 08:46 pm HK News Desk ಕರ್ನಾಟಕ
ಕಾರವಾರ, ಮಾ.11: ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಸೋಮವಾರ ಮತ್ತೊಂದು ವಿವಾದಕ್ಕೆ ತುತ್ತಾಗಿದ್ದಾರೆ. ನಾನು ಹೇಳಿದ್ದರ ಬಗ್ಗೆ ಬೇವರ್ಸಿ ಮಾಧ್ಯಮಗಳು ಬೇಕಾದ್ದನ್ನು ಬರೆಯಲಿ, ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನೀವೆಲ್ಲಾ (ಜನರು) ಇದಕ್ಕೆ ವಿಚಲಿತರಾಗಬಾರದು ಎಂದು ಅನಂತ ಕುಮಾರ್ ಹೆಗಡೆ ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
“ನೀವು ಯಾವುದೋ ಪಕ್ಷದ ಕಾರ್ಯಕರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಏನೇನೋ ಹೇಳಿದರು ಅಂತ ವಿಚಲಿತರಾಗಬಾರದು. ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡಿಯಬೇಕು ಎಂದು ಹೇಳಿದ ಅವರು, “ಆನೆ ನಡೀತಾ ಇದ್ರೆ ಯಾವಾಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.? ನಾಯಿಗಳಿಗೂ ಗೊತ್ತು ನಾವು ಎಷ್ಟೇ ಬೊಗಳಿದ್ರೂ ಆನೆಗೆ ಏನೂ ಮಾಡೋಕೆ ಆಗಲ್ಲ ಅಂತ. ನಾಯಿಗಳು ಬೊಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ’’ ಎಂದು ಹೇಳಿದ್ದಾರೆ.

ನಮ್ಮ ಸಿದ್ದಾಮುಲ್ಲಾ ಖಾನ್ ಸರಕಾರದಲ್ಲಿ ದುಡ್ಡಿಲ್ಲ, ಗ್ಯಾರಂಟಿ ಗ್ಯಾರಂಟಿ ಹೇಳಿ ಒಂದೇ ವರ್ಷದಲ್ಲಿ ರಾಜ್ಯ ದಿವಾಳಿ ಎದ್ದು ಹೋಗಿದೆ. ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ನೀಡಲು ಕೂಡಾ ಹಿಂದೆ ಮುಂದೆ ನೋಡ್ತಿದ್ದಾರೆ. ಗ್ರಾ.ಪಂ. ಸದಸ್ಯರಿಗೆ ದೊರೆಯುವ ಮಾಸಾಶನ ಕೂಡಾ ಸರಿಯಾಗಿ ತಲುಪುತ್ತಿಲ್ಲ. ಬಿಜೆಪಿ ಸದಸ್ಯರು ಹೋಗಿ ಗಲಾಟೆ ಮಾಡಿದ ನಂತರ ಕೇವಲ ನಾಲ್ಕು ತಿಂಗಳದ್ದು ನೀಡಿದ್ದಾರೆ. ಬಿಜೆಪಿ ಸರಕಾರವಿದ್ದಾಗ ಹಣವಿರುತ್ತೆ, ಕಾಂಗ್ರೆಸ್ ಸರಕಾರವಿದ್ದಾಗ ಹಣವಿರುವುದಿಲ್ಲ ಎಂದವರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಾವು 400 ಸ್ಥಾನ ಪಡೆದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ. ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ತಿದ್ದುತ್ತೇವೆ. ಜಾತ್ಯತೀತ ಪದವನ್ನು ಸಂವಿಧಾನದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿರುವುದು ಭಾರೀ ವಿವಾದಕ್ಕೆ ಗುರಿಯಾಗಿತ್ತು.
MP Ananth kumar hegde calls media as Dogs and pigs sparks controversy. Says when elephant is walking will it bother about the dogs barking in the street he added.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm