ಬ್ರೇಕಿಂಗ್ ನ್ಯೂಸ್
11-03-24 08:46 pm HK News Desk ಕರ್ನಾಟಕ
ಕಾರವಾರ, ಮಾ.11: ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಸೋಮವಾರ ಮತ್ತೊಂದು ವಿವಾದಕ್ಕೆ ತುತ್ತಾಗಿದ್ದಾರೆ. ನಾನು ಹೇಳಿದ್ದರ ಬಗ್ಗೆ ಬೇವರ್ಸಿ ಮಾಧ್ಯಮಗಳು ಬೇಕಾದ್ದನ್ನು ಬರೆಯಲಿ, ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನೀವೆಲ್ಲಾ (ಜನರು) ಇದಕ್ಕೆ ವಿಚಲಿತರಾಗಬಾರದು ಎಂದು ಅನಂತ ಕುಮಾರ್ ಹೆಗಡೆ ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
“ನೀವು ಯಾವುದೋ ಪಕ್ಷದ ಕಾರ್ಯಕರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಏನೇನೋ ಹೇಳಿದರು ಅಂತ ವಿಚಲಿತರಾಗಬಾರದು. ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡಿಯಬೇಕು ಎಂದು ಹೇಳಿದ ಅವರು, “ಆನೆ ನಡೀತಾ ಇದ್ರೆ ಯಾವಾಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.? ನಾಯಿಗಳಿಗೂ ಗೊತ್ತು ನಾವು ಎಷ್ಟೇ ಬೊಗಳಿದ್ರೂ ಆನೆಗೆ ಏನೂ ಮಾಡೋಕೆ ಆಗಲ್ಲ ಅಂತ. ನಾಯಿಗಳು ಬೊಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ’’ ಎಂದು ಹೇಳಿದ್ದಾರೆ.
ನಮ್ಮ ಸಿದ್ದಾಮುಲ್ಲಾ ಖಾನ್ ಸರಕಾರದಲ್ಲಿ ದುಡ್ಡಿಲ್ಲ, ಗ್ಯಾರಂಟಿ ಗ್ಯಾರಂಟಿ ಹೇಳಿ ಒಂದೇ ವರ್ಷದಲ್ಲಿ ರಾಜ್ಯ ದಿವಾಳಿ ಎದ್ದು ಹೋಗಿದೆ. ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ನೀಡಲು ಕೂಡಾ ಹಿಂದೆ ಮುಂದೆ ನೋಡ್ತಿದ್ದಾರೆ. ಗ್ರಾ.ಪಂ. ಸದಸ್ಯರಿಗೆ ದೊರೆಯುವ ಮಾಸಾಶನ ಕೂಡಾ ಸರಿಯಾಗಿ ತಲುಪುತ್ತಿಲ್ಲ. ಬಿಜೆಪಿ ಸದಸ್ಯರು ಹೋಗಿ ಗಲಾಟೆ ಮಾಡಿದ ನಂತರ ಕೇವಲ ನಾಲ್ಕು ತಿಂಗಳದ್ದು ನೀಡಿದ್ದಾರೆ. ಬಿಜೆಪಿ ಸರಕಾರವಿದ್ದಾಗ ಹಣವಿರುತ್ತೆ, ಕಾಂಗ್ರೆಸ್ ಸರಕಾರವಿದ್ದಾಗ ಹಣವಿರುವುದಿಲ್ಲ ಎಂದವರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಾವು 400 ಸ್ಥಾನ ಪಡೆದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ. ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ತಿದ್ದುತ್ತೇವೆ. ಜಾತ್ಯತೀತ ಪದವನ್ನು ಸಂವಿಧಾನದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿರುವುದು ಭಾರೀ ವಿವಾದಕ್ಕೆ ಗುರಿಯಾಗಿತ್ತು.
MP Ananth kumar hegde calls media as Dogs and pigs sparks controversy. Says when elephant is walking will it bother about the dogs barking in the street he added.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm