ಬ್ರೇಕಿಂಗ್ ನ್ಯೂಸ್
12-03-24 03:15 pm HK News Desk ಕರ್ನಾಟಕ
ಮೈಸೂರು, ಮಾ 12: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೋಮವಾರ ತಡರಾತ್ರಿ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.
ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.
ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ.
ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.
Mysuru Mp Prathap Simha cries out during Facebook live over ticket missing, says thanks to all for your love and support. Can't predict anything in politics he added.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am