ಬ್ರೇಕಿಂಗ್ ನ್ಯೂಸ್
12-03-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯಾದ್ಯಂತ ಏಕಪ್ರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 8 ಮತ್ತು 9ನೇ ತರಗತಿಗೆ ನಡೆಸುತ್ತಿದ್ದ ಪಬ್ಲಿಕ್ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ತಡೆಯಾಜ್ಞೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಾ.13ರಿಂದ 16ರ ವರೆಗೆ ಆಯೋಜಿಸಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪರೀಕ್ಷೆ ರದ್ದುಗೊಳಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಮಾನ್ಯ ಮಾಡಿತ್ತು. ಆದರೆ, ರಾಜ್ಯ ಸರಕಾರ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿ, ಏಕಸದಸ್ಯ ಪೀಠದ ನಿರ್ಧಾರಕ್ಕೆ ತಡೆಯಾಜ್ಞೆ ತಂದಿತ್ತು. ವಿಭಾಗೀಯ ಪೀಠವು ಪರೀಕ್ಷೆಗಳನ್ನು ಎಂದಿನಂತೆ ನಡೆಸುವುದಕ್ಕೆ ಅವಕಾಶ ನೀಡಿತ್ತು. ಅದರಂತೆ, ಸೋಮವಾರದಿಂದ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಖಾಸಗಿ ಶಾಲಾಡಳಿತ ಒಕ್ಕೂಟವು ತನ್ನ ಪಟ್ಟು ಸಡಿಲಿಸದೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಇದರಿಂದ ಶಾಲಾ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತು ಹೋದಂತಾಗಿದ್ದು, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಉಳಿದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದ ಶಾಲೆಗಳಲ್ಲಿ ಎಂದಿನಂತೆ ಶಾಲಾ ತರಗತಿ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದು, ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸ್ವಾಯತ್ತ ಅಧಿಕಾರ ಹೊಂದಿದ್ದೇವೆ ಎಂಬುದನ್ನು ಕೋರ್ಟಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ವಿದ್ಯಾರ್ಥಿಗಳು ಮತ್ತು ಶಾಲಾಡಳಿತಕ್ಕೆ ಗೊಂದಲಕ್ಕೀಡು ಮಾಡಿದೆ.
The Supreme Court on Tuesday (March 12) put on hold the Board Exams proposed to be held by the Karnataka Government for students of Classes 5, 8 and 9 of the schools affiliated to the State Board.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am