ಬ್ರೇಕಿಂಗ್ ನ್ಯೂಸ್
12-03-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯಾದ್ಯಂತ ಏಕಪ್ರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 8 ಮತ್ತು 9ನೇ ತರಗತಿಗೆ ನಡೆಸುತ್ತಿದ್ದ ಪಬ್ಲಿಕ್ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ತಡೆಯಾಜ್ಞೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಾ.13ರಿಂದ 16ರ ವರೆಗೆ ಆಯೋಜಿಸಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪರೀಕ್ಷೆ ರದ್ದುಗೊಳಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಮಾನ್ಯ ಮಾಡಿತ್ತು. ಆದರೆ, ರಾಜ್ಯ ಸರಕಾರ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿ, ಏಕಸದಸ್ಯ ಪೀಠದ ನಿರ್ಧಾರಕ್ಕೆ ತಡೆಯಾಜ್ಞೆ ತಂದಿತ್ತು. ವಿಭಾಗೀಯ ಪೀಠವು ಪರೀಕ್ಷೆಗಳನ್ನು ಎಂದಿನಂತೆ ನಡೆಸುವುದಕ್ಕೆ ಅವಕಾಶ ನೀಡಿತ್ತು. ಅದರಂತೆ, ಸೋಮವಾರದಿಂದ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಖಾಸಗಿ ಶಾಲಾಡಳಿತ ಒಕ್ಕೂಟವು ತನ್ನ ಪಟ್ಟು ಸಡಿಲಿಸದೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಇದರಿಂದ ಶಾಲಾ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತು ಹೋದಂತಾಗಿದ್ದು, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಉಳಿದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದ ಶಾಲೆಗಳಲ್ಲಿ ಎಂದಿನಂತೆ ಶಾಲಾ ತರಗತಿ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದು, ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸ್ವಾಯತ್ತ ಅಧಿಕಾರ ಹೊಂದಿದ್ದೇವೆ ಎಂಬುದನ್ನು ಕೋರ್ಟಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ವಿದ್ಯಾರ್ಥಿಗಳು ಮತ್ತು ಶಾಲಾಡಳಿತಕ್ಕೆ ಗೊಂದಲಕ್ಕೀಡು ಮಾಡಿದೆ.
The Supreme Court on Tuesday (March 12) put on hold the Board Exams proposed to be held by the Karnataka Government for students of Classes 5, 8 and 9 of the schools affiliated to the State Board.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am