ಬ್ರೇಕಿಂಗ್ ನ್ಯೂಸ್
12-03-24 08:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಕೆ. ಜಯಪ್ರಕಾಶ ಹೆಗ್ಡೆಯವರು ಕಡೆಗೂ ಕಾಂಗ್ರೆಸ್ ಪಕ್ಷವನ್ನು ಅಧಿಕೃತ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ನಾಯಕರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್ , ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು.


ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ನೇರ ನಡೆನುಡಿಯ ಸರಳ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯಲ್ಲಿ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಆನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು. ಹಿಂದೆ ಜನತಾ ಪರಿವಾರದಲ್ಲಿದ್ದಾಗ ಜಯಪ್ರಕಾಶ್ ಹೆಗ್ಡೆ, ಸಿದ್ದರಾಮಯ್ಯ ಆಪ್ತರಾಗಿದ್ದರು. ಇದೀಗ ಸಿದ್ದರಾಮಯ್ಯ ಮತ್ತು ಡಿಕೆಶಿ ಸಾರಥ್ಯದಲ್ಲಿ ಮತ್ತೆ ಕಾಂಗ್ರೆಸ್ ಪಾಳಯ ಸೇರಿದ್ದು ಉಡುಪಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಮತ್ತೊಮ್ಮೆ ಲೋಕಸಭೆ ಅಭ್ಯರ್ಥಿಯಾಗೋದು ಖಚಿತವಾಗಿದೆ.
Jayaprakash Hegde joins congress party. Former minister and BJP leader K. Jayaprakash Hegde has returned to the Congress on Tuesday at the Karnataka Pradesh Congress Committee (KPCC) office in Bengaluru. According to sources, Hegde is likely the grand old party’s frontrunner for the Udupi-Chikkamagaluru constituency seat for the upcoming Lok Sabha elections.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am