ಬ್ರೇಕಿಂಗ್ ನ್ಯೂಸ್
12-03-24 08:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಕೆ. ಜಯಪ್ರಕಾಶ ಹೆಗ್ಡೆಯವರು ಕಡೆಗೂ ಕಾಂಗ್ರೆಸ್ ಪಕ್ಷವನ್ನು ಅಧಿಕೃತ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ನಾಯಕರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್ , ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು.


ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ನೇರ ನಡೆನುಡಿಯ ಸರಳ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯಲ್ಲಿ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಆನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು. ಹಿಂದೆ ಜನತಾ ಪರಿವಾರದಲ್ಲಿದ್ದಾಗ ಜಯಪ್ರಕಾಶ್ ಹೆಗ್ಡೆ, ಸಿದ್ದರಾಮಯ್ಯ ಆಪ್ತರಾಗಿದ್ದರು. ಇದೀಗ ಸಿದ್ದರಾಮಯ್ಯ ಮತ್ತು ಡಿಕೆಶಿ ಸಾರಥ್ಯದಲ್ಲಿ ಮತ್ತೆ ಕಾಂಗ್ರೆಸ್ ಪಾಳಯ ಸೇರಿದ್ದು ಉಡುಪಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಮತ್ತೊಮ್ಮೆ ಲೋಕಸಭೆ ಅಭ್ಯರ್ಥಿಯಾಗೋದು ಖಚಿತವಾಗಿದೆ.
Jayaprakash Hegde joins congress party. Former minister and BJP leader K. Jayaprakash Hegde has returned to the Congress on Tuesday at the Karnataka Pradesh Congress Committee (KPCC) office in Bengaluru. According to sources, Hegde is likely the grand old party’s frontrunner for the Udupi-Chikkamagaluru constituency seat for the upcoming Lok Sabha elections.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am