ಬ್ರೇಕಿಂಗ್ ನ್ಯೂಸ್
13-03-24 06:31 pm HK News Desk ಕರ್ನಾಟಕ
ಶಿವಮೊಗ್ಗ, ಮಾ.13: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಲಿದೆ ಎಂಬ ಚರ್ಚೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಸಿಟ್ಟಿಗೆ ಕಾರಣವಾಗಿದೆ. ದಿಢೀರ್ ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ, ಅಭಿಮಾನಿಗಳು ಶಿವಮೊಗ್ಗದಲ್ಲಿ ಪಕ್ಷೇತರ ಸ್ಪರ್ಧಿಸಬೇಕು ಎಂಬ ಒತ್ತಡ ಬರುತ್ತಿದೆ. ಹಿತೈಷಿಗಳ ಜೊತೆ, ಜನರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ. ಕಾದು ನೋಡಿ ಎಂದು ಹೇಳಿರುವುದು ಕುತೂಹಲ ಕೆರಳಿಸಿದೆ.
ಟಿವಿಯಲ್ಲಿ ಏನ್ ಬೇಕಾದರೂ ಹಾಕಿಕೊಳ್ಳಲಿ. ನಾನೇನೂ ಹೇಳುವುದಿಲ್ಲ. ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ನೀವು ಪಕ್ಷೇತರ ನಿಲ್ಲಬೇಕು ಅಂತ ಒತ್ತಡ ಹಾಕುತ್ತಿದ್ದಾರೆ, ಈ ಬಗ್ಗೆ ಸಭೆ ಕರೆದಿದ್ದಾರೆ. ನಾನು ಸಹ ಆ ಸಭೆಯಲ್ಲಿ ಭಾಗವಹಿಸುತ್ತೇನೆ. ಆಮೇಲೆ ತೀರ್ಮಾನ ಮಾಡುತ್ತೇನೆ. ಭಾರತೀಯ ಜನತಾ ಪಾರ್ಟಿ ಸಂಸ್ಕಾರ ಕಲಿಸಿಕೊಟ್ಟಿದೆ. ನಾಲ್ಕು ಗೋಡೆ ನಡುವೆ ಕುಳಿತು ತೀರ್ಮಾನ ಮಾಡಬೇಕು ಎಂದು ಹೇಳಿಕೊಟ್ಟಿದೆ. ಏನ್ ಆಗುತ್ತೆ ಎಂಬುದನ್ನು ಕಾದು ನೋಡಿ ಎಂದಿದ್ದಾರೆ.
ಊಹಾಪೋಹಗಳಿಗೆ ಉತ್ತರ ಕೊಡಲ್ಲ!
ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ. ಊಹಾಪೋಹಗಳಿಗೆ ಉತ್ತರ ಕೊಡಲ್ಲ, ನಾನು ನಿಲ್ಲುವುದರಿಂದ ಒಳ್ಳೆಯದೋ ಕೆಟ್ಟದೋ ಚರ್ಚೆ ಮಾಡೋಣ. ಕಳೆದ ಸಲ ನಮ್ಮ ಪಕ್ಷದಲ್ಲಿ ಅನೇಕ ತಪ್ಪಾಗಿದೆ. ಅದನ್ನು ನಾವು ತಿದ್ದಿಕೊಳ್ಳಬೇಕಿದೆ. ಸುದ್ದಿಗೋಷ್ಠಿ ಕರೆಯುತ್ತಿದಂತೆ ವರಿಷ್ಠರಿಗೂ ಕೂತುಹಲ ಆಗಿದೆ, ಏನಾದರೂ ಹೇಳಿ ಬೀಡಬಹುದು ಅಂತ. ನನ್ನ ಅಭಿಮಾನಿ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎಂದಿದ್ದಾರೆ. ಹಿತೈಷಿಗಳ ಜೊತೆ ಚೆರ್ಚೆ ಮಾಡಿ ತೀರ್ಮಾನ ತಿಳಿಸುತ್ತೇನೆ ಎಂದು ಹೇಳಿದರು.
ನಾನಾಗಿ ಹಾವೇರಿಗೆ ಹೋಗಿಲ್ಲ. ಶಿವಮೊಗ್ಗ ವಿಧಾನಸಭಾ ಟಿಕೆಟ್ ನನ್ನ ಮಗನಿಗೆ ಕೇಳಿದಾಗ ಅಮಿತ್ ಶಾ ಅವರು ನಿಮ್ಮ ಸೊಸೆಗೆ ಟಿಕೆಟ್ ಕೊಡುತ್ತೇವೆ ಎಂದರು. ನಾನು ನನ್ನ ಸೊಸೆಯನ್ನು ಹೊರಗೆ ಕಳಿಸಲ್ಲ ಎಂದಿದ್ದೆ. ಹಾವೇರಿ ಚುನಾವಣೆ ಹೋಗುವ ಮುಂಚೆ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದೆ. ಆಗ ಯಡಿಯೂರಪ್ಪನವರು ಟಿಕೆಟ್ ಸಹ ಕೊಡುತ್ತೇನೆ, ನಾನು ಓಡಾಡುತ್ತೇನೆ ಎಂದಿದ್ದರು. ಈಗಲೂ ನನಗೆ ನಂಬಿಕೆ ಇದೆ, ಟಿಕೆಟ್ ಸಿಗುತ್ತೆ ಅಂತ ಎಂದರು.
My followers are asking me to stand as independent candidate from Shivamogga says Eshwarappa, let me decide with my members and supporters he added.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm