ಬ್ರೇಕಿಂಗ್ ನ್ಯೂಸ್
14-03-24 02:26 pm HK News Desk ಕರ್ನಾಟಕ
ಕೊಪ್ಪಳ, ಮಾ.14: ಸಂಸದ ಸಂಗಣ್ಣ ಕರಡಿಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆಯೇ ಅವರ ಬೆಂಬಲಿಗರ, ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಬೆಂಬಲಿಗರ ಸಿಟ್ಟಿಗೆ ಗುರುವಾರ ನಗರದ ಬಿಜೆಪಿ ಕಚೇರಿ ಗಾಜುಗಳು ಪುಡಿಯಾಗಿವೆ.
ಅಲ್ಲದೆ, ಸಂಗಣ್ಣ ಕರಡಿ ಬೆಂಬಲಿಗರು ಬಿಜೆಪಿ ಕಚೇರಿಯಲ್ಲಿ ದಾಂಧಲೆ ನಡೆಸಿದ್ದು, ನೂತನ ಅಭ್ಯರ್ಥಿ ವೈದ್ಯ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗಿದರು.

ಇನ್ನು ಸುದ್ದಿಗೋಷ್ಠಿ ಮುಗಿಸಿ ಹೊರ ಬಂದ ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ರನ್ನು ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಪರಿಸ್ಥಿತಿ ಕೈ ಮಿರುವ ಹಂತಕ್ಕೆ ತಲುಪಿತ್ತು. ಕೊನೆಗೆ ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಹಾಲಿ ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಕೆಲ ನಾಯಕರು ಕರಡಿ ಕುಟುಂಬವನ್ನು ತಮ್ಮ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಡರಾತ್ರಿ ಸಂಗಣ್ಣ ಕರಡಿ ಅವರಿಗೆ ಫೋನ್ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಲೋಕಸಭೆ ಟಿಕೆಟ್ ನೀಡುವ ಭರವಸೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುವೆ ಎಂದು ಸಂಗಣ್ಣ ಕರಡಿ ಹೇಳಿದ್ದಾರೆ.
ಇದರಿಂದ ಕರಡಿ ಸಂಗಣ್ಣ ಕುಟುಂಬದ ಮುಂದಿನ ನಡೆ ಕೂತೂಹಲ ಹುಟ್ಟಿಸಿದೆ. ಕಳೆದ ಎರಡು ಅವಧಿಯಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಈ ಬಾರಿ ಹ್ಯಾಟ್ರಿಕ್ ಜಯಭೇರಿ ಬಾರಿಸುವ ಕನವರಿಕೆಯಲ್ಲಿದ್ದಾರೆ. ಹೀಗಾಗಿ ಟಿಕೆಟ್ಗೆ ತೀವ್ರ ಪೈಪೋಟಿ ಒಡ್ಡಿದ್ದರು. ಅಲ್ಲದೆ, ಒಂದು ಹಂತದಲ್ಲಿ ಅವರಿಗೆ ಟಿಕೆಟ್ ಫೈನಲ್ ಆಗಿದೆ ಎಂಬ ಮಾತುಗಳೂ ಕೇಳಿ ಬಂದಿದ್ದವು. ಆದರೆ ಇದೀಗ ಕೊಪ್ಪಳ ಬಿಜೆಪಿ ಟಿಕೆಟ್ ವೈದ್ಯ ಬಸವರಾಜ ಕ್ಯಾವಟರ್ ಪಾಲಾಗಿದೆ.
Koppal Karadi Sanganna BJP ticket missed, members enter BJP Office vandalise window glass
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm