ಬ್ರೇಕಿಂಗ್ ನ್ಯೂಸ್
14-03-24 02:26 pm HK News Desk ಕರ್ನಾಟಕ
ಕೊಪ್ಪಳ, ಮಾ.14: ಸಂಸದ ಸಂಗಣ್ಣ ಕರಡಿಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆಯೇ ಅವರ ಬೆಂಬಲಿಗರ, ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಬೆಂಬಲಿಗರ ಸಿಟ್ಟಿಗೆ ಗುರುವಾರ ನಗರದ ಬಿಜೆಪಿ ಕಚೇರಿ ಗಾಜುಗಳು ಪುಡಿಯಾಗಿವೆ.
ಅಲ್ಲದೆ, ಸಂಗಣ್ಣ ಕರಡಿ ಬೆಂಬಲಿಗರು ಬಿಜೆಪಿ ಕಚೇರಿಯಲ್ಲಿ ದಾಂಧಲೆ ನಡೆಸಿದ್ದು, ನೂತನ ಅಭ್ಯರ್ಥಿ ವೈದ್ಯ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗಿದರು.

ಇನ್ನು ಸುದ್ದಿಗೋಷ್ಠಿ ಮುಗಿಸಿ ಹೊರ ಬಂದ ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ರನ್ನು ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಪರಿಸ್ಥಿತಿ ಕೈ ಮಿರುವ ಹಂತಕ್ಕೆ ತಲುಪಿತ್ತು. ಕೊನೆಗೆ ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಹಾಲಿ ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಕೆಲ ನಾಯಕರು ಕರಡಿ ಕುಟುಂಬವನ್ನು ತಮ್ಮ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಡರಾತ್ರಿ ಸಂಗಣ್ಣ ಕರಡಿ ಅವರಿಗೆ ಫೋನ್ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಲೋಕಸಭೆ ಟಿಕೆಟ್ ನೀಡುವ ಭರವಸೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುವೆ ಎಂದು ಸಂಗಣ್ಣ ಕರಡಿ ಹೇಳಿದ್ದಾರೆ.
ಇದರಿಂದ ಕರಡಿ ಸಂಗಣ್ಣ ಕುಟುಂಬದ ಮುಂದಿನ ನಡೆ ಕೂತೂಹಲ ಹುಟ್ಟಿಸಿದೆ. ಕಳೆದ ಎರಡು ಅವಧಿಯಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಈ ಬಾರಿ ಹ್ಯಾಟ್ರಿಕ್ ಜಯಭೇರಿ ಬಾರಿಸುವ ಕನವರಿಕೆಯಲ್ಲಿದ್ದಾರೆ. ಹೀಗಾಗಿ ಟಿಕೆಟ್ಗೆ ತೀವ್ರ ಪೈಪೋಟಿ ಒಡ್ಡಿದ್ದರು. ಅಲ್ಲದೆ, ಒಂದು ಹಂತದಲ್ಲಿ ಅವರಿಗೆ ಟಿಕೆಟ್ ಫೈನಲ್ ಆಗಿದೆ ಎಂಬ ಮಾತುಗಳೂ ಕೇಳಿ ಬಂದಿದ್ದವು. ಆದರೆ ಇದೀಗ ಕೊಪ್ಪಳ ಬಿಜೆಪಿ ಟಿಕೆಟ್ ವೈದ್ಯ ಬಸವರಾಜ ಕ್ಯಾವಟರ್ ಪಾಲಾಗಿದೆ.
Koppal Karadi Sanganna BJP ticket missed, members enter BJP Office vandalise window glass
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am