ಬ್ರೇಕಿಂಗ್ ನ್ಯೂಸ್
14-03-24 02:26 pm HK News Desk ಕರ್ನಾಟಕ
ಕೊಪ್ಪಳ, ಮಾ.14: ಸಂಸದ ಸಂಗಣ್ಣ ಕರಡಿಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆಯೇ ಅವರ ಬೆಂಬಲಿಗರ, ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಬೆಂಬಲಿಗರ ಸಿಟ್ಟಿಗೆ ಗುರುವಾರ ನಗರದ ಬಿಜೆಪಿ ಕಚೇರಿ ಗಾಜುಗಳು ಪುಡಿಯಾಗಿವೆ.
ಅಲ್ಲದೆ, ಸಂಗಣ್ಣ ಕರಡಿ ಬೆಂಬಲಿಗರು ಬಿಜೆಪಿ ಕಚೇರಿಯಲ್ಲಿ ದಾಂಧಲೆ ನಡೆಸಿದ್ದು, ನೂತನ ಅಭ್ಯರ್ಥಿ ವೈದ್ಯ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗಿದರು.

ಇನ್ನು ಸುದ್ದಿಗೋಷ್ಠಿ ಮುಗಿಸಿ ಹೊರ ಬಂದ ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ರನ್ನು ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಪರಿಸ್ಥಿತಿ ಕೈ ಮಿರುವ ಹಂತಕ್ಕೆ ತಲುಪಿತ್ತು. ಕೊನೆಗೆ ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಹಾಲಿ ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಕೆಲ ನಾಯಕರು ಕರಡಿ ಕುಟುಂಬವನ್ನು ತಮ್ಮ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಡರಾತ್ರಿ ಸಂಗಣ್ಣ ಕರಡಿ ಅವರಿಗೆ ಫೋನ್ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಲೋಕಸಭೆ ಟಿಕೆಟ್ ನೀಡುವ ಭರವಸೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುವೆ ಎಂದು ಸಂಗಣ್ಣ ಕರಡಿ ಹೇಳಿದ್ದಾರೆ.
ಇದರಿಂದ ಕರಡಿ ಸಂಗಣ್ಣ ಕುಟುಂಬದ ಮುಂದಿನ ನಡೆ ಕೂತೂಹಲ ಹುಟ್ಟಿಸಿದೆ. ಕಳೆದ ಎರಡು ಅವಧಿಯಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಈ ಬಾರಿ ಹ್ಯಾಟ್ರಿಕ್ ಜಯಭೇರಿ ಬಾರಿಸುವ ಕನವರಿಕೆಯಲ್ಲಿದ್ದಾರೆ. ಹೀಗಾಗಿ ಟಿಕೆಟ್ಗೆ ತೀವ್ರ ಪೈಪೋಟಿ ಒಡ್ಡಿದ್ದರು. ಅಲ್ಲದೆ, ಒಂದು ಹಂತದಲ್ಲಿ ಅವರಿಗೆ ಟಿಕೆಟ್ ಫೈನಲ್ ಆಗಿದೆ ಎಂಬ ಮಾತುಗಳೂ ಕೇಳಿ ಬಂದಿದ್ದವು. ಆದರೆ ಇದೀಗ ಕೊಪ್ಪಳ ಬಿಜೆಪಿ ಟಿಕೆಟ್ ವೈದ್ಯ ಬಸವರಾಜ ಕ್ಯಾವಟರ್ ಪಾಲಾಗಿದೆ.
Koppal Karadi Sanganna BJP ticket missed, members enter BJP Office vandalise window glass
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm