ಬ್ರೇಕಿಂಗ್ ನ್ಯೂಸ್
14-03-24 06:14 pm HK News Desk ಕರ್ನಾಟಕ
ಶಿವಮೊಗ್ಗ, ಮಾ 14: ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ ಕೇಳಿದ್ದರು, ಎರಡೂ ತಪ್ಪಿ ಹೋಯ್ತು. ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ ಕೇಳುತ್ತಿದ್ದಾರೆ. ಅದು ಸಿಗಲಿಲ್ಲವಾದರೆ ಜಿ.ಪಂ. ಇದೆಯಲ್ಲಾ. ಅದಕ್ಕಾಗಿ ಈ ರೀತಿ ಮಾತನಾಡ್ತಿದ್ದಾರೆ. ಈಶ್ವರಪ್ಪ ಖಂಡಿತವಾಗಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ. ಅವರಿಗೆ ಖಂಡಿತವಾಗಿ ಅಂತ ಧಮ್ ಇಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಕಿಡಿಕಾರಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಯಾಕೆ ಅಷ್ಟೊಂದು ಮನ್ನಣೆ ಕೊಡುತ್ತೀರಿ? ಕೈಲಾಗದ ಈಶ್ವರಪ್ಪ ಬಗ್ಗೆ ಏಕೆ ಪ್ರಶ್ನೆ ಕೇಳುತ್ತೀರಿ? ಶಿವಮೊಗ್ಗ ಜಿಲ್ಲೆಯ ಯಾವ ತಾಲೂಕಿನಲ್ಲಿ ಈಶ್ವರಪ್ಪ ಪ್ರಭಾವವಿದೆ? ಈಶ್ವರಪ್ಪ ಯಾವ ರಾಜ್ಯ ನಾಯಕ? ಕೇವಲ ಶಿವಮೊಗ್ಗ ನಗರಕ್ಕೆ ನಾಯಕ. ಈಶ್ವರಪ್ಪ ಧೈರ್ಯಶಾಲಿಯಾದ್ರೆ ಜನರಿಗೆ ಬೇಕಾದ ವ್ಯಕ್ತಿಯಾದರೆ ಪಕ್ಷೇತರವಾಗಿ ಸ್ಪರ್ಧೆ ಮಾಡಲಿ. ಈಶ್ವರಪ್ಪ ಅವರ ಕೈಯಲ್ಲಿ ಏನೇನು ಆಗಲ್ಲ. ಕೇವಲ ಬೋರ್ಡ್ ಅಧ್ಯಕ್ಷರ ಸ್ಥಾನ ಪಡೆಯಲು ಈ ರೀತಿ ಮಾಡುತ್ತಿದ್ದಾರೆ. ಈಶ್ವರಪ್ಪ ಯಾವುದೇ ರಾಷ್ಟ್ರ ಭಕ್ತನಲ್ಲ, ಕಪಟ ರಾಷ್ಟ್ರ ಭಕ್ತ ಎಂದರು.
ಈಶ್ವರಪ್ಪ ಏನಾದರೂ ಪಕ್ಷೇತರನಾಗಿ ಸ್ಪರ್ಧೆ ಮಾಡಿದರೆ ನಾನು ಈಶ್ವರಪ್ಪನವರಿಗೆ ಮತ ಹಾಕುತ್ತೇನೆ. ಧಮ್ ತಾಕತ್ತಿದ್ದರೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ. ಅವರಿಗೆ ಧಮ್ ಗಿಮ್ ಏನು ಇಲ್ಲ. ಅವರು ಗಂಡಸಾ? ನಾಳೆ ಮೋದಿ ಬಂದಾಗ ಮೋದಿ ಕಾಲಿಗೆ ಬೀಳುತ್ತಾರೆ ಎಂದು ಕುಟುಕಿದರು.
ಯುದ್ದ ಆರಂಭವಾಗಿದೆ:
ಈ ಬಾರಿ ನಾವು ಶಿವಮೊಗ್ಗ ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ. ನಮ್ಮ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಯುದ್ದ ಆರಂಭವಾಗಿದೆ. ವ್ಯವಸ್ಥಿತ ಜಾಲ ಹೆಣೆಯುತ್ತಿದ್ದೇವೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಗೆಲ್ಲುವುದು ರೋಚಕವಾಗಿದೆ ಎಂದು ಆಯನೂರು ಹೇಳಿದರು.
ಸರ್ಕಾರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. 7 ನೇ ವೇತನ ಆಯೋಗದ ವರದಿ ಸಿದ್ದವಾಗಿದೆ ಎಂಬ ಮಾಹಿತಿ ಇದೆ. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಚುನಾವಣೆ ಘೋಷಣೆ ನಂತರ ನೀತಿ ಸಂಹಿತೆ ಜಾರಿಯಾಗಲಿದೆ. ನೀತಿ ಸಂಹಿತೆ ಜಾರಿಯಾಗುವ ಮೊದಲು ವೇತನ ಆಯೋಗ ವರದಿಯನ್ನು ಸರಕಾರಕ್ಕೆ ಸಲ್ಲಿಸಬೇಕು. ಸರಕಾರ ವರದಿ ಸ್ವೀಕರಿಸಿ ಸಚಿವ ಸಂಪುಟದಲ್ಲಿ ಚರ್ಚೆಗೆ ಇಟ್ಟು ಜಾರಿ ಮಾಡಬೇಕು. ಎನ್ ಪಿಎಸ್ ಪದ್ದತಿಯನ್ನು ರದ್ದುಗೊಳಿಸಿ ಒಪಿಎಸ್ ಪದ್ದತಿ ಜಾರಿಗೊಳಿಸಬೇಕು ಎಂದು ಹೇಳಿದರು.
Ayanur Manjunath slams Eshwarappa, says he's a blackmail politician. Says he doesn't have courage or guts to fight independently.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm