ಬ್ರೇಕಿಂಗ್ ನ್ಯೂಸ್
16-03-24 08:58 pm HK News Desk ಕರ್ನಾಟಕ
ಕೊಪ್ಪಳ, ಮಾ.16: ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ಕೊಟ್ಟಿಲ್ಲ, ಆದರೆ ಸೌಜನ್ಯಕ್ಕೂ ಈ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ. ಇದು ನನಗೆ ಬೇಸರ ಆಗಿದೆ. ಒಂದೇ ಮಾತಿನಲ್ಲಿ ಹೇಳುವುದೆಂದರೆ ನಾಯಕರು ನನ್ನನ್ನ ಗುಜರಿ ಲೀಡರ್ ಎಂದು ತಿಳಿದುಕೊಂಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ನಾಯಕರ ವಿರುದ್ದವೇ ಆಕ್ರೋಶ ಹೊರ ಹಾಕಿದ್ದಾರೆ.
ಗಿಣಗೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕರಡಿ ಸಂಗಣ್ಣ ಒಬ್ಬ ಗುಜರಿ ಲೀಡರ್ ಎಂದು ತಿಳಿದು ಅವರು ನನಗೆ ಟಿಕೆಟ್ ಕೊಡದೇ ಬಿಟ್ಟಿರಬಹುದು. ನನಗೆ ಟಿಕಿಟ್ ತಪ್ಪಿದಾಗ ಬೆಂಬಲಿಗರಲ್ಲಿ ಅಸಮಾಧಾನ ಆಗುವುದು ಸಹಜ. ಪಕ್ಷ ಘೋಷಿಸಿದ ಅಭ್ಯರ್ಥಿ ಒಪ್ಪಿಕೊಳ್ಳಬೇಕು. ಬಿಜೆಪಿ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿದೆ. ಅವರನ್ನು ಬದಲಿಸಿ ಎನ್ನುವುದಿಲ್ಲ. ಟಿಕೆಟ್ ವಿಚಾರ ಮುಗಿದ ಅಧ್ಯಾಯ ಎಂದರು.
ಹೈಕಮಾಂಡ್ಗೆ ಮೂರು ಪ್ರಶ್ನೆ ಕೇಳಿರುವೆ. ನನಗೆ ಬಿಜೆಪಿ ಹೈಕಮಾಂಡ್ ಈ ವರೆಗೂ ಯಾಕೆ ಕರೆ ಮಾಡಿಲ್ಲ ? ನನಗೆ ಟಿಕೆಟ್ ತಪ್ಪಿಸಲು ಕಾರಣ ಯಾರು ? ಉದ್ದೇಶವೇನು ? ಈ ಪ್ರಶ್ನೆಗೆ ಅವರು ಉತ್ತರ ಕೊಡುವುದನ್ನು ಕಾಯುತ್ತಿದ್ದೇನೆ. ಹೈಕಮಾಂಡ್ನಿಂದ ಉತ್ತರ ಸಿಗುವ ವರೆಗೂ ನಾನು ಕಾದು ನೋಡುವೆ. ನಾವೇನು ಗಡುವು ಕೊಟ್ಟಿಲ್ಲ. ಗುಡುವು ಕೊಟ್ಟರೆ ನಮಗೆ ನಷ್ಟ ಎಂದರು.
ನಾನು ಈ ಬಾರಿ ಮತ್ತೊಮ್ಮೆ ಅವಕಾಶ ಕೊಡಿ ಎಂದು ಹೈಕಮಾಂಡ್ಗೆ ಮನವಿ ಮಾಡಿದ್ದೇ ಆದರೆ ಟಿಕೆಟ್ ಸಿಗಲಿಲ್ಲ. ಕಾಂಗ್ರೆಸ್ನ ಹಲವು ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ. ಕಾಂಗ್ರೆಸ್ಗೆ ಆಹ್ವಾನ ವಿಚಾರ ನಾನು ಇನ್ನು ಯಾವ ನಿರ್ಧಾರ ಮಾಡಿಲ್ಲ. ನಮ್ಮವರ ಅಭಿಪ್ರಾಯ ಪಡೆಯಬೇಕಾಗುತ್ತದೆ. ಶ್ರೀನಾಥ್ ಅವರು ನನ್ನ ಮೇಲಿನ ಅಭಿಮಾನಕ್ಕೆ ಅವರು ಆಹ್ವಾನ ಮಾಡಿದ್ದಾರೆ ಎಂದರು.
ನಾನೇನು ರಾಜಕೀಯ ನಿವೃತ್ತಿಯಾಗುವುದಿಲ್ಲ. ನನ್ನನ್ನು ನಂಬಿದ ತುಂಬಾ ಜನರು ಇದ್ದಾರೆ. ಬಿಜೆಪಿ ಬಿಟ್ಟು ಏಲ್ಲಿಗೂ ಹೋಗುವುದಿಲ್ಲ. ರಾಜಕೀಯವಾಗಿ ಮಾಡುವ ಕೆಲಸಗಳು ಸಾಕಷ್ಟಿವೆ. ನನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸಾಕಷ್ಟು ನೋವಿದೆ ಎಂದು ಭಾವನಾತ್ಮಕ ಮಾತುಗಳನ್ನಾಡಿದರು.
BJP ticket miss, Koppal karadi sanganna cries on stage, says BJP leaders have taught that I am a scrap
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm