ಬ್ರೇಕಿಂಗ್ ನ್ಯೂಸ್
19-03-24 12:09 pm HK News Desk ಕರ್ನಾಟಕ
ಹುಬ್ಬಳ್ಳಿ , ಮಾ 18: ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇತ್ತೀಚೆಗೆ ಪ್ರಬಲ ಮೋದಿ ಟೀಕಾಕಾರನಾಗಿ ಬದಲಾಗಿದ್ದಾರೆ. ತುಂಬ ಅಧ್ಯಯನ ಮಾಡಿ, ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಚರ್ಚೆಗಳಲ್ಲಿ, ಸಭೆಗಳಲ್ಲಿ, ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಮೋದಿ ಅವರನ್ನು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಸಂತೋಷ್ ಲಾಡ್ ಒಮ್ಮಿಂದೊಮ್ಮೆಗೆ ಹೀಗೆ ಪ್ರಖರ ಟೀಕಾಕಾರನಾಗಿ ಬದಲಾಗಿದ್ದು ಹೇಗೆ? ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸ್ಪಷ್ಟ ಉತ್ತರ ಸಿಕ್ಕಿದೆಯಂತೆ !
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಹ್ಲಾದ್ ಜೋಶಿ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸಂತೋಷ್ ಲಾಡ್ ಬೈಗುಳದ ರಹಸ್ಯ ತೆರೆದಿಟ್ಟಿದ್ದಾರೆ.
ಸಂತೋಷ್ ಲಾಡ್ ಅವರು ಇತ್ತೀಚೆಗೆ ನನ್ನನ್ನು ಮತ್ತು ಮೋದಿಯವರನ್ನು ನಿರಂತರವಾಗಿ ಬಯ್ಯುತ್ತಿದ್ದಾರೆ, ಟೀಕೆ ಮಾಡುತ್ತಿದ್ದಾರೆ. ಅವರು ಈ ರೀತಿಯ ಟೀಕೆ ಮಾಡುತ್ತಿರುವುದು ತಮ್ಮ ಸಚಿವ ಪದವಿ ಉಳಿಸಿಕೊಳ್ಳಲು. ಇದನ್ನು ಸ್ವತಃ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಜೋಶಿ ಹೇಳಿದರು.
ನಾನು ಮತ್ತು ಲಾಡ್ ಆಗಾಗ ಫ್ಲೈಟ್ನಲ್ಲಿ ಸಿಗ್ತಾ ಇರುತ್ತೇವೆ. ದಿಲ್ಲಿಯಿಂದ ಬರುವಾಗ, ಬೆಂಗಳೂರಿನಿಂದ ಬರುವಾಗ ಸಿಗುತ್ತೇವೆ. ಮಾತಾಡಿಕೊಳ್ತೇವೆ. ಒಂದು ದಿನ ನಾನು ಕೇಳಿದೆ. ನೀವು ನನ್ನ ಮೇಲೆ ನಿರಂತರವಾಗಿ ಟೀಕೆ ಮಾಡ್ತಾ ಇರ್ತೀರಿ. ಅದೇನೂ ತೊಂದರೆ ಇಲ್ಲ. ನಾನು ಸಣ್ಣವನು. ಆದರೆ, ಮೋದಿ ಅವರ ಮೇಲೂ ದಾಳಿ ಮಾಡ್ತೀರಲ್ಲಾ, ನಿಮ್ಮ ಪರಿಸ್ಥಿತಿ ಏನು? ಎಂದು ಕೇಳಿದೆ.
ನಾನು ಮತ್ತು ಸಂತೋಷ್ ಲಾಡ್ ಹಿಂದಿಯಲ್ಲಿ ಮಾತಾಡೋದು ಜಾಸ್ತಿ. ಅವರು ಹಿಂದಿಯಲ್ಲಿ ಹೇಳಿದರು: ಕ್ಯಾ ಕರೂ ಸಾಬ್, ಊಪರ್ ಸೇ ಇನ್ಸ್ಟ್ರಕ್ಷನ್ ಹೈ, ಮೈ ಡೈಲಿ ಗಾಲಿ ನಹೀ ದಿಯಾ ತೋ ನೌಕರಿ ಚಲೀ ಜಾತೀ ಹೈ! (ಏನು ಮಾಡಲಿ ಸಾಹೇಬ್ರೆ.. ಮೇಲಿನಿಂದ ನನಗೆ ಸೂಚನೆ ಇದೆ. ದಿನಾ ಬಯ್ಯದೆ ಹೋದರೆ ನನ್ನ ಕೆಲಸವೇ ಹೋಗಿ ಬಿಡ್ತದೆ) ಎಂದು ಹೇಳಿದೆ.
ಆಗಿಂದ ನಾನು ತಲೆ ಕೆಡಿಸಿಕೊಂಡಿಲ್ಲ, ನೀವು ತಲೆ ಕೆಡಿಸಿಕೊಳ್ಳಬೇಡಿ. ಉತ್ತರ ಕೊಡುವಾಗ ಕೊಡ್ತೀನಿ ಎಂದು ಜೋಶಿಯವರು ಸಭೆಯಲ್ಲಿ ಹೇಳುವ ವಿಡಿಯೊ ಈಗ ಎಲ್ಲೆಡೆ ವೈರಲ್ ಆಗಿದೆ.
Santosh lad says no option need to shout at Modi always have instructions, Pralhad Joshi reveals flight conversation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm