ಬ್ರೇಕಿಂಗ್ ನ್ಯೂಸ್
19-03-24 01:44 pm Bangalore Correspondent ಕರ್ನಾಟಕ
ಬೆಂಗಳೂರು ಮಾ 18: ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.


ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು.
ಇದೇ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದಾಡಿದ ಬೆಳವಣಿಗೆ ಕೂಡ ಕಂಡು ಬಂದಿತು. ಪೊಲೀಸರ ಈ ಕ್ರಮದ ವಿರುದ್ಧ ಸುರೇಶ್ ಕುಮಾರ್ ಪ್ರತಿಭಟಿಸಿದರು.

ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಹಲ್ಲೆ ಮಾಡಿದ್ದ ಐವರು ಅರೆಸ್ಟ್ ;
ಅಂಗಡಿಯಲ್ಲಿ ಜೋರಾಗಿ ಸೌಂಡ್ ಇಟ್ಟು ಹನುಮಾನ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗ್ಯಾಂಗ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಗಾಯಗೊಂಡ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
#WATCH | Karnataka: People protested in Bengaluru this morning following an altercation between a group of people and a shopkeeper during 'Azaan' time on Sunday.
— ANI (@ANI) March 19, 2024
The altercation occurred on 17th March when a shopkeeper played devotional songs near Siddanna Layout. pic.twitter.com/qtdjQwOmbf
Pro-Hindu organizations in the city have come out for a show of strength in connection with the incident in which a young man was attacked for singing Hanuman Chalisa in a mobile shop in Nagaratpet, resulting in a tense situation in Nagaratpet.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm