ಬ್ರೇಕಿಂಗ್ ನ್ಯೂಸ್
21-03-24 07:00 pm HK News Desk ಕರ್ನಾಟಕ
ಹಾಸನ, ಮಾ.21: ತಾಳಿ ಕಟ್ಟುವ ಶುಭ ವೇಳೆಯಲ್ಲೇ ವಧುವಿನ ಪ್ರಿಯತಮ ಬಂದು ಕಿರಿಕ್ ಮಾಡಿದ್ದರಿಂದ ಮದುವೆ ಅರ್ಧದಲ್ಲೇ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಗುರುವಾರ ಬೇಲೂರಿನ ತೇಜಸ್ವಿನಿ ಹಾಗ ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ಏರ್ಪಾಡು ಆಗಿತ್ತು. ತಾಳಿ ಕಟ್ಟಲು ಇನ್ನೇನು ಸಿದ್ಧತೆ ಆಗುತ್ತಿದ್ದಾಗಲೇ ಯುವಕನೊಬ್ಬ ಕಲ್ಯಾಣ ಮಂಟಪಕ್ಕೆ ಬಂದು ಮದುವೆಗೆ ಅಡ್ಡಿಪಡಿಸಿದ್ದಾನೆ. ಹಾಸನ ಹೊರವಲಯದ ಗವೇನಹಳ್ಳಿಯ ಯುವಕ ನವೀನ್ ಎಂಬಾತ ತಾಳಿಯನ್ನು ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ, ನನ್ನ ಜೊತೆಗೇ ಮದುವೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾನೆ. ಇದರಿಂದ ಕಲ್ಯಾಣ ಮಂಟಪದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು. ಬಳಿಕ ಬೇಲೂರು ಪೊಲೀಸರು ಆಗಮಿಸಿದ್ದು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತೇಜಸ್ವಿನಿ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ತನ್ನ ಪ್ರೀತಿ ವಿಚಾರ ಮುಚ್ಚಿಟ್ಟು ಪ್ರಮೋದ್ ಕುಮಾರ್ ಜೊತೆ ಮದುವೆಗೆ ಯುವತಿ ಮುಂದಾಗಿದ್ದಳು. ಆದರೆ ವಂಚನೆಗೊಳಗಾದ ಯುವಕ ತನ್ನ ಜೊತೆಗಿನ ಪ್ರೀತಿ ವಿಷಯ ಬಯಲು ಮಾಡಿದ್ದಾನೆ. ಯುವತಿಯ ಪ್ರೀತಿ ಪ್ರೇಮದ ವಿಚಾರ ತಿಳಿದು ವರ ಪ್ರಮೋದ್ ತನಗೆ ಈ ಮದುವೆ ಬೇಡ ಎಂದು ಮದುವೆ ಮಂಟಪದಿಂದಲೇ ಹೊರ ನಡೆದಿದ್ದಾನೆ. ವಧು ಮತ್ತು ವರನ ಸಂಬಂಧಿಕರು ಬೇಲೂರು ಪೊಲೀಸ್ ಠಾಣೆಯಲ್ಲಿ ಸೇರಿದ್ದು ಮಾತುಕತೆ ನಡೆಸಿದ್ದಾರೆ.
Hassan marriage stopped by lover at last moment. Lover who came suddenly into the wedding hall alleged that the bride was in love with him and took away the Mangala Sutra. Belur police have registered a case.
11-03-26 06:14 pm
HK News Staffer
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am