ಬ್ರೇಕಿಂಗ್ ನ್ಯೂಸ್
21-03-24 07:00 pm HK News Desk ಕರ್ನಾಟಕ
ಹಾಸನ, ಮಾ.21: ತಾಳಿ ಕಟ್ಟುವ ಶುಭ ವೇಳೆಯಲ್ಲೇ ವಧುವಿನ ಪ್ರಿಯತಮ ಬಂದು ಕಿರಿಕ್ ಮಾಡಿದ್ದರಿಂದ ಮದುವೆ ಅರ್ಧದಲ್ಲೇ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಗುರುವಾರ ಬೇಲೂರಿನ ತೇಜಸ್ವಿನಿ ಹಾಗ ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ಏರ್ಪಾಡು ಆಗಿತ್ತು. ತಾಳಿ ಕಟ್ಟಲು ಇನ್ನೇನು ಸಿದ್ಧತೆ ಆಗುತ್ತಿದ್ದಾಗಲೇ ಯುವಕನೊಬ್ಬ ಕಲ್ಯಾಣ ಮಂಟಪಕ್ಕೆ ಬಂದು ಮದುವೆಗೆ ಅಡ್ಡಿಪಡಿಸಿದ್ದಾನೆ. ಹಾಸನ ಹೊರವಲಯದ ಗವೇನಹಳ್ಳಿಯ ಯುವಕ ನವೀನ್ ಎಂಬಾತ ತಾಳಿಯನ್ನು ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ, ನನ್ನ ಜೊತೆಗೇ ಮದುವೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾನೆ. ಇದರಿಂದ ಕಲ್ಯಾಣ ಮಂಟಪದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು. ಬಳಿಕ ಬೇಲೂರು ಪೊಲೀಸರು ಆಗಮಿಸಿದ್ದು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತೇಜಸ್ವಿನಿ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ತನ್ನ ಪ್ರೀತಿ ವಿಚಾರ ಮುಚ್ಚಿಟ್ಟು ಪ್ರಮೋದ್ ಕುಮಾರ್ ಜೊತೆ ಮದುವೆಗೆ ಯುವತಿ ಮುಂದಾಗಿದ್ದಳು. ಆದರೆ ವಂಚನೆಗೊಳಗಾದ ಯುವಕ ತನ್ನ ಜೊತೆಗಿನ ಪ್ರೀತಿ ವಿಷಯ ಬಯಲು ಮಾಡಿದ್ದಾನೆ. ಯುವತಿಯ ಪ್ರೀತಿ ಪ್ರೇಮದ ವಿಚಾರ ತಿಳಿದು ವರ ಪ್ರಮೋದ್ ತನಗೆ ಈ ಮದುವೆ ಬೇಡ ಎಂದು ಮದುವೆ ಮಂಟಪದಿಂದಲೇ ಹೊರ ನಡೆದಿದ್ದಾನೆ. ವಧು ಮತ್ತು ವರನ ಸಂಬಂಧಿಕರು ಬೇಲೂರು ಪೊಲೀಸ್ ಠಾಣೆಯಲ್ಲಿ ಸೇರಿದ್ದು ಮಾತುಕತೆ ನಡೆಸಿದ್ದಾರೆ.
Hassan marriage stopped by lover at last moment. Lover who came suddenly into the wedding hall alleged that the bride was in love with him and took away the Mangala Sutra. Belur police have registered a case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm