ಬ್ರೇಕಿಂಗ್ ನ್ಯೂಸ್
22-03-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 22: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಹೌದು, ಮಂಡ್ಯ ಭಾಗದ ಜೆಡಿಎಸ್ ನ ಮಾಜಿ ಮೂವರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಎಂಎಲ್ ಸಿ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ. ಶ್ರೀನಿವಾಸ್, ಮಾಜಿ ಎಂಎಲ್ ಸಿ ಅಪ್ಪಾಜಿ ಗೌಡ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು ಎಂದರು.
ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಮರಿ ತಿಬ್ಬೇಗೌಡ ಮಾತನಾಡಿ, ಮೈಸೂರು ಚಾಮರಾಜನಗರ, ಹಾಸನ ಮಂಡ್ಯ ಜಿಲ್ಲೆಗಳಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದೇನೆ. ಶಿಕ್ಷಕ ಸಮುದಾಯದ ಹಾಗೂ ಜನರ ಹಿತದೃಷ್ಟಿಯಿಂದ ಜಾತ್ಯತೀತ ನಿಲುವಿನೊಂದಿಗೆ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಬಿಕೆ ಹರಿಪ್ರಸಾದ್, ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ಜೆಡಿಎಸ್ ಮತ್ತು ಹಾಲಿ ಸಂಸದ ಸುಮಲತಾ ಇಬ್ಬರೂ ಈ ಕ್ಷೇತ್ರಕ್ಕೆ ಪಟ್ಟು ಹಿಡಿದಿರುವುದರಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ. ಇದೇ ಹೊತ್ತಿನಲ್ಲಿ ಮೂವರು ಮುಖಂಡರು ಕಾಂಗ್ರಸ್ ಗೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.
Three former JDS MLAs from Mandya join congress, JDS in trouble including Marithibbegowda.
29-04-24 11:33 am
HK News Desk
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm