ಬ್ರೇಕಿಂಗ್ ನ್ಯೂಸ್
22-03-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 22: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಹೌದು, ಮಂಡ್ಯ ಭಾಗದ ಜೆಡಿಎಸ್ ನ ಮಾಜಿ ಮೂವರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಎಂಎಲ್ ಸಿ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ. ಶ್ರೀನಿವಾಸ್, ಮಾಜಿ ಎಂಎಲ್ ಸಿ ಅಪ್ಪಾಜಿ ಗೌಡ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು ಎಂದರು.


ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಮರಿ ತಿಬ್ಬೇಗೌಡ ಮಾತನಾಡಿ, ಮೈಸೂರು ಚಾಮರಾಜನಗರ, ಹಾಸನ ಮಂಡ್ಯ ಜಿಲ್ಲೆಗಳಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದೇನೆ. ಶಿಕ್ಷಕ ಸಮುದಾಯದ ಹಾಗೂ ಜನರ ಹಿತದೃಷ್ಟಿಯಿಂದ ಜಾತ್ಯತೀತ ನಿಲುವಿನೊಂದಿಗೆ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಬಿಕೆ ಹರಿಪ್ರಸಾದ್, ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ಜೆಡಿಎಸ್ ಮತ್ತು ಹಾಲಿ ಸಂಸದ ಸುಮಲತಾ ಇಬ್ಬರೂ ಈ ಕ್ಷೇತ್ರಕ್ಕೆ ಪಟ್ಟು ಹಿಡಿದಿರುವುದರಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ. ಇದೇ ಹೊತ್ತಿನಲ್ಲಿ ಮೂವರು ಮುಖಂಡರು ಕಾಂಗ್ರಸ್ ಗೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.
Three former JDS MLAs from Mandya join congress, JDS in trouble including Marithibbegowda.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am