ಬ್ರೇಕಿಂಗ್ ನ್ಯೂಸ್
22-03-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 22: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಹೌದು, ಮಂಡ್ಯ ಭಾಗದ ಜೆಡಿಎಸ್ ನ ಮಾಜಿ ಮೂವರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಎಂಎಲ್ ಸಿ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ. ಶ್ರೀನಿವಾಸ್, ಮಾಜಿ ಎಂಎಲ್ ಸಿ ಅಪ್ಪಾಜಿ ಗೌಡ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು ಎಂದರು.


ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಮರಿ ತಿಬ್ಬೇಗೌಡ ಮಾತನಾಡಿ, ಮೈಸೂರು ಚಾಮರಾಜನಗರ, ಹಾಸನ ಮಂಡ್ಯ ಜಿಲ್ಲೆಗಳಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದೇನೆ. ಶಿಕ್ಷಕ ಸಮುದಾಯದ ಹಾಗೂ ಜನರ ಹಿತದೃಷ್ಟಿಯಿಂದ ಜಾತ್ಯತೀತ ನಿಲುವಿನೊಂದಿಗೆ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಬಿಕೆ ಹರಿಪ್ರಸಾದ್, ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ಜೆಡಿಎಸ್ ಮತ್ತು ಹಾಲಿ ಸಂಸದ ಸುಮಲತಾ ಇಬ್ಬರೂ ಈ ಕ್ಷೇತ್ರಕ್ಕೆ ಪಟ್ಟು ಹಿಡಿದಿರುವುದರಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ. ಇದೇ ಹೊತ್ತಿನಲ್ಲಿ ಮೂವರು ಮುಖಂಡರು ಕಾಂಗ್ರಸ್ ಗೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.
Three former JDS MLAs from Mandya join congress, JDS in trouble including Marithibbegowda.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm