ಬ್ರೇಕಿಂಗ್ ನ್ಯೂಸ್
22-03-24 05:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿದ್ದಾರೆ. ಜನರ ಬಳಿ ಹೋಗಿ ಬಿರುಸಿನಿಂದ ಮತಬೇಟೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾವು ಅವರ ವಿರುದ್ಧ ದೂರು ನೀಡಿದೆ.
ನಟ ಶಿವರಾಜ್ ಕುಮಾರ್ ತನ್ನ ಪತ್ನಿಯ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದರಿಂದ ಅವರು ನಟಿಸಿರುವ ಸಿನಿಮಾ, ಜಾಹೀರಾತುಗಳನ್ನು ಸದ್ಯದ ಮಟ್ಟಿಗೆ ನಿಷೇಧ ಮಾಡಬೇಕು. ಯಾವುದನ್ನೂ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು, ಅವರು ತಮ್ಮ ಚಿತ್ರಗಳ ಮೂಲಕ ಜನರಿಗೆ ಪ್ರಭಾವ ಬೀರುತ್ತಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬಿಜೆಪಿ ಹೇಳಿದೆ.
ಪತ್ನಿ ಗೀತಾಗೆ ಬೆಂಬಲ ನೀಡಿರುವ ಶಿವರಾಜ್ ಕುಮಾರ್ ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್ ತಮ್ಮ ಜನಪ್ರಿಯತೆ ಹಾಗೂ ಚಲನಚಿತ್ರಗಳಿಂದ ಮತದಾರರ ಮೇಲೆ ಪ್ರಭಾವ ಬೀರಲಿದ್ದಾರೆ. ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ನಟನೆಯ ಚಿತ್ರ ಪ್ರಸಾರಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
Campaign for wife Geeta, BJP complains Election Commission to ban movies of actor Shivraj Kumar.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm