ಬ್ರೇಕಿಂಗ್ ನ್ಯೂಸ್
22-03-24 05:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿದ್ದಾರೆ. ಜನರ ಬಳಿ ಹೋಗಿ ಬಿರುಸಿನಿಂದ ಮತಬೇಟೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾವು ಅವರ ವಿರುದ್ಧ ದೂರು ನೀಡಿದೆ.
ನಟ ಶಿವರಾಜ್ ಕುಮಾರ್ ತನ್ನ ಪತ್ನಿಯ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದರಿಂದ ಅವರು ನಟಿಸಿರುವ ಸಿನಿಮಾ, ಜಾಹೀರಾತುಗಳನ್ನು ಸದ್ಯದ ಮಟ್ಟಿಗೆ ನಿಷೇಧ ಮಾಡಬೇಕು. ಯಾವುದನ್ನೂ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು, ಅವರು ತಮ್ಮ ಚಿತ್ರಗಳ ಮೂಲಕ ಜನರಿಗೆ ಪ್ರಭಾವ ಬೀರುತ್ತಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬಿಜೆಪಿ ಹೇಳಿದೆ.
ಪತ್ನಿ ಗೀತಾಗೆ ಬೆಂಬಲ ನೀಡಿರುವ ಶಿವರಾಜ್ ಕುಮಾರ್ ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್ ತಮ್ಮ ಜನಪ್ರಿಯತೆ ಹಾಗೂ ಚಲನಚಿತ್ರಗಳಿಂದ ಮತದಾರರ ಮೇಲೆ ಪ್ರಭಾವ ಬೀರಲಿದ್ದಾರೆ. ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ನಟನೆಯ ಚಿತ್ರ ಪ್ರಸಾರಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
Campaign for wife Geeta, BJP complains Election Commission to ban movies of actor Shivraj Kumar.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm