ಬ್ರೇಕಿಂಗ್ ನ್ಯೂಸ್
22-03-24 07:33 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 21: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡಲಾಗ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಆಪರೇಷನ್ ಕಮಲ ಶುರುಮಾಡಿದ್ದು ಬಿಜೆಪಿ. ಇವತ್ತೂ ಕೂಡಾ ಈ ಪ್ರಯತ್ನ ನಡೆಯುತ್ತಿದೆ. ಇವಾಗ ಐವತ್ತು ಕೋಟಿ ಆಫರ್ದಾರಿ ನೀಡ್ತಿದ್ದಾರೆ ಶಾಸಕರಿಗೆ. ರಾಜೀನಾಮೆ ಕೊಡಿ, ಚುನಾವಣಾ ಖರ್ಚು ನಾವೇ ನೋಡಿಕೊಳ್ಳುತ್ತೇವೆ ಎಂಬ ಭರವಸೆಯನ್ನು ಕೊಡ್ತಾರೆ ಎಂದು ಆರೋಪಿಸಿದರು. ಈ ಹಣ ಎಲ್ಲಿಂದ ? ಇದು ಕಪ್ಪು ಹಣ ಅಲ್ಲವೇ? ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದರು. ಇಡಿ, ಐಟಿ ದಾಳಿ ಕೇವಲ ವಿರೋಧ ಪಕ್ಷಗಳ ಮೇಲೆ ಏಕೆ? ಬಿಜೆಪಿಯ ಮೇಲೆ ಏಕಿಲ್ಲ? ಬಿಜೆಪಿ ಭ್ರಷ್ಟಾಚಾರದ ಪಿತಾಮಹ ಎಂದರು.
ಬಿಜೆಪಿ ಪ್ರಜಾಪ್ರಭುತ್ವ ಮೌಲ್ಯವನ್ನು ನಾಶ ಮಾಡ್ತಿದೆ. ಜನರ ಅಭಿಪ್ರಾಯ ಅವರ ಪರವಾಗಿ ಇಲ್ಲ ಎಂದು ಗೊತ್ತಾಗಿದೆ. ಅದಕ್ಕಾಗಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಆರ್ ಎಸ್ ಎಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸಂವಿಧಾನದ ಬಗ್ಗೆ ಗೌರವ ಇಲ್ಲ. ಇದನ್ನು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಇದನ್ನು ಅವರು ಅನೇಕ ಬಾರಿ ಸ್ಪಷ್ಟಪಡಿಸಿದ್ದಾರೆ.
ಸಂವಿಧಾನ ಬದಲಾವಣೆ ಮಾಡುವ ಹಿಡನ್ ಅಜೆಂಡಾ ವನ್ನು ಬೇರೆಯವರ ಮೂಲಕ ಹೇಳಿಸುತ್ತಿದ್ದಾರೆ. ಬಿಜೆಪಿ ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟಿದೆ ಎಂದು ವಾಗ್ದಾಳಿ ನಡೆಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನೇಕ ರಾಜಕೀಯ ಪಕ್ಷಗಳು ಇವೆ. ಸಂವಿಧಾನ ಅದಕ್ಕೆ ಅವಕಾಶ ಮಾಡಿಕೊಟ್ಟಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್ ಎಸ್ ಬಿಜೆಪಿ ಸಕ್ರಿಯವಾಗಿರಲಿಲ್ಲ ಎಂದು ಆರೋಪಿಸಿದರು.
Karnataka Chief Minister Siddaramaiah on Friday alleged that the BJP is offering Rs 50 crore each to ruling Congress MLAs to resign, and also promising them funds in subsequent byelections after they quit, as part of "Operation Kamala". "Operation Kamala" (Operation Lotus), coined by opposition parties, refers to alleged attempts of the BJP to engineer defection of opposition legislators to install its own government and ensure its stability.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm