ಬ್ರೇಕಿಂಗ್ ನ್ಯೂಸ್
24-03-24 05:31 pm Mangaluru Correspondent ಕರ್ನಾಟಕ
ಬೆಂಗಳೂರು, ಮಾ.24: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ, ಹಿಂದಿ ಇಂಗ್ಲಿಷ್ ಬರಲ್ಲ, ಅವರಿಗೆ ಮತ ಹಾಕಬೇಡಿ ಎಂಬ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಲ್ಲದೆ, "ಆಪರೇಷನ್ ಕಮಲ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಲಾಗಿದೆ" ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧವೂ ಬಿಜೆಪಿಯಿಂದ ದೂರು ನೀಡಲಾಗಿದೆ. ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ವಕ್ತಾರ ಪ್ರಕಾಶ್ ಕೋಣೆಮನೆ, ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ್ ಕುಮಾರ್ ಜತೆಗಿದ್ದರು. ಜಯಪ್ರಕಾಶ್ ಹೆಗ್ಡೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.
ಮಾ.22ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ "ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ" ಎಂದಿದ್ದರು. ಈ ಬಗ್ಗೆ "ಕೋಟಗೆ ಹಿಂದಿ, ಇಂಗ್ಲಿಷ್ ಬರಲ್ಲ, ಗೆಲ್ಲಿಸಬೇಡಿ" ಎಂಬ ಶೀರ್ಷಿಕೆಯಡಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸದರಿ ಹೇಳಿಕೆಯು ಭಾಷಾ ಸಾಮರಸ್ಯವನ್ನು ಹದಗೆಡಿಸುವ ಹಾಗೂ ಕನ್ನಡಿಗರ ಅಸ್ಮಿತೆಗೆ ಧಕ್ಕೆ ತರುವುದಲ್ಲದೆ ಪ್ರಾದೇಶಿಕ ಭಾಷೆಯ ಬಗ್ಗೆ ಅವಮಾನಕರ ಹೇಳಿಕೆಯಾಗಿರುತ್ತದೆ. ಆದ್ದರಿಂದ ಭಾಷೆಯ ಹೆಸರಿನಲ್ಲಿ ಮತ ಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸಬೇಡಿ ಎಂದು ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಹೇಳಿದೆ.
The Opposition BJP in Karnataka has filed a formal complaint with Election Commission of India against Congress candidate from Udupi-Chikkamagaluru constituency K Jayaprakash Hegde for his reported appeal to voters not to support his BJP rival Kota Srinivas Poojary on the grounds that he does not know English and Hindi languages.
02-05-24 06:15 pm
Bangalore Correspondent
Naveen Gowda, Prajwal Revanna sex case, SIT:...
02-05-24 04:41 pm
lookout notice, Prajwal Revanna, SIT: ಪ್ರಜ್ವಲ...
02-05-24 01:30 pm
Yatnal, DK Shivakumar: ರಾಜ್ಯದಲ್ಲಿ ಎರಡು ಸಿಡಿ ಫ...
02-05-24 10:24 am
Kumaraswamy, DK shivakumar, prajwal Revanna:...
02-05-24 10:20 am
01-05-24 10:25 pm
HK NEWS
Salman Khan Shootout: ನಟ ಸಲ್ಮಾನ್ ಖಾನ್ ಮನೆ ಮೇಲ...
01-05-24 03:57 pm
Arvind Kejriwals, Supreme Court: ಬದುಕು ಮತ್ತು...
30-04-24 11:02 pm
ಭಾರತ ಜಗತ್ತಿನ ಸೂಪರ್ ಪವರ್ ಆಗಲು ಹೊರಟಿದ್ದರೆ, ಪಾ...
30-04-24 06:20 pm
Prajwal Revanna Hassan sex, Amit Shah: ರಾಷ್ಟ್...
30-04-24 05:27 pm
02-05-24 02:24 pm
Mangalore Correspondent
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
Prajwal Revanna sex scam, ACP Dhanya Nayak,...
30-04-24 01:05 pm
01-05-24 10:18 pm
Mangaluru Correspondent
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm
Bangalore Crime, Fraud, House Rent: ಫ್ಲ್ಯಾಟ್...
29-04-24 11:50 am
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm