ಬ್ರೇಕಿಂಗ್ ನ್ಯೂಸ್
24-03-24 09:46 pm HK News Desk ಕರ್ನಾಟಕ
ಬೆಳಗಾವಿ, ಮಾ.24: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.
ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯ ಪಡಬೇಕಾಗಿಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿ ಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.
Belagavi Prof GL Manjunath says will teach Kota Srinivas Poojary free English within a month's time. Congress candidate from the Udupi-Chikmagaluru constituency K Jayaprakash Hegde has clarified that, contrary to the allegation made against him in certain media reports recently, he had not made derogatory statements on his BJP rival Kota Srinivas Poojary's knowledge of language.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm