ಬ್ರೇಕಿಂಗ್ ನ್ಯೂಸ್
26-03-24 03:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಸ್ಫೋಟದ ಪ್ರಧಾನ ಆರೋಪಿಗಳು ಮುಸಾವೀರ್, ಅಬ್ದುಲ್ ಮತೀನ್ ತಾಹ್ಯ ಎಂದು ಪತ್ತೆ ಹಚ್ಚಲಾಗಿದೆ. ಇವರ ಜೊತೆ ಈ ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದರು. ಇವರು ಬೆಂಗಳೂರಿನಲ್ಲಿದ್ದು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಶಂಕೆ ಇದೆ. ಅಲ್ಲದೆ, ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲ ಮಾಡಿಕೊಟ್ಟಿರುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟಿದ್ದಾನೆ ಎಂಬ ಮಾಹಿತಿಯನ್ನು ಕಲೆಹಾಕಿದ್ದು ಅದಕ್ಕೂ ಮುನ್ನ ಎರಡು ತಿಂಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ. ಮುಸಾವಿರ್ ಮತ್ತು ಅಬ್ದುಲ್ ಮತೀನ್ ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್ಎ ಟೆಸ್ಟ್ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್ ಎನ್ಐಎ ತನಿಖೆಗೆ ಪೂರಕವಾಗಿದೆ.
ತನಿಖೆಯ ಆರಂಭದಲ್ಲಿ ಎನ್ಐಎ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸಿತ್ತು. ಈ ವ್ಯಕ್ತಿ ಕಂಡುಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿತ್ತು. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ. ಹಾಗಿದ್ದರೂ ಆರೋಪಿ ಕರ್ನಾಟಕದಲ್ಲಿ ಉಳಿದುಕೊಂಡಿರುವ ಬಗ್ಗೆ ಶಂಕೆಯಿಲ್ಲ.
In the ongoing investigation into the recent bomb blast at Rameshwaram café in Bengaluru, the National Investigation Agency (NIA) has detained two individuals suspected to be connected to the incident. The agency is intensifying its efforts to track down the perpetrator responsible for planting the explosive device.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm